ಬೆಳಗಾವಿ ಜಿಲ್ಲೆಯ ಬೈಲೂರು ಮಠದ ನಿಜಗುಣಾನಂದ ಸ್ವಾಮೀಜಿ ಅವರನ್ನು ಇದೇ ತಿಂಗಳ 29ರಂದು ‘ಸಂಹಾರ’ ಮಾಡುವುದಾಗಿ ಬೆದರಿಕೆ ಪತ್ರವೊಂದು ಇತ್ತೀಚೆಗೆ ಅವರ ಮಠಕ್ಕೆ ಬಂದಿತ್ತು.ಬಜರಂಗದಳದ ಮಾಜಿ ನಾಯಕ ಮಹೇಂದ್ರಕುಮಾರ್, ನಿಡುಮಾಮಿಡಿ ವೀರಭದ್ರ ಸ್ವಾಮೀಜಿ, ಚಿತ್ರನಟ ಪ್ರಕಾಶ್ ರಾಜ್, ಚೇತನಕುಮಾರ್, ಬಿ.ಟಿ. ಲಲಿತಾ ನಾಯಕ, ಮಹೇಶ್ಚಂದ್ರ ಗುರು, ಭಗವಾನ್, ದಿನೇಶ ಅಮಿನ್ ಮಟ್ಟು, ರೌಡಿ ಅಗ್ನಿ ಶ್ರೀಧರ್, ಬೃಂದಾ ಕಾರಟ್ ಅವರನ್ನೂ ಹತ್ಯೆ ಮಾಡಲಾಗುವುದು ಎಂದುಬೆದರಿಕೆ ಪತ್ರದಲ್ಲಿ ಉಲ್ಲೇಖವಾಗಿತ್ತು.