ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ರಾಜಕಾರಣದಲ್ಲಿ ಕುಮಾರಸ್ವಾಮಿ ಗಂಭೀರವಾಗಿ ವರ್ತಿಸುತ್ತಿಲ್ಲ. ಅವರು ಗಂಭೀರ ರಾಜಕಾರಣಿಯಾಗಿ ಉಳಿದಿಲ್ಲ. ಮಾಜಿ ಮುಖ್ಯಮಂತ್ರಿ ಆಗಿದ್ದ ಹಾಗೂ ಮಾಜಿ ಪ್ರಧಾನಿ ಅವರ ಪುತ್ರರಾದವರು ಹೀಗೆ ಪಾಕಿಸ್ತಾನದ ಬಗ್ಗೆ ಪ್ರೀತಿ ತೋರುವುದು ನೋವುಂಟು ಮಾಡುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.