<p><strong>ಮೈಸೂರು:</strong> ‘ಎಚ್.ಡಿ.ಕುಮಾರಸ್ವಾಮಿ ಕೇವಲ ಜೆಡಿಎಸ್ ಮುಖ್ಯಮಂತ್ರಿ ಅಲ್ಲ; ಅವರು ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ. ಅವರು ಮಾಡುವ ಒಳ್ಳೆಯ ಕೆಲಸಗಳ ಶ್ರೇಯ ಸಮ್ಮಿಶ್ರ ಸರ್ಕಾರಕ್ಕೂ ಸಿಗುತ್ತದೆ’ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ತಿಳಿಸಿದರು.</p>.<p>ಸುತ್ತೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಗ್ರಾಮ ವಾಸ್ತವ್ಯವನ್ನು ಅವರು ಪ್ರಚಾರಕ್ಕಾಗಿ ಮಾಡುತ್ತಿಲ್ಲ. ಇದರಿಂದ ಗ್ರಾಮದ ಸಮಗ್ರ ಪ್ರಗತಿಯಾಗುತ್ತದೆ. ಇದನ್ನು ಟೀಕಿಸುವ ವಿರೋಧ ಪಕ್ಷಗಳು ರಾಜಕೀಯಕ್ಕೂ ಇತಿಮಿತಿ ಇದೆ ಎಂಬುದನ್ನು ಅರಿಯಬೇಕು’ ಎಂದು ಹೇಳಿದರು.</p>.<p>ಸಮ್ಮಿಶ್ರ ಸರ್ಕಾರದ ಕಾರ್ಯಕ್ರಮಗಳನ್ನು ಜನರ ಬಳಿಗೆ ತೆಗೆದುಕೊಂಡು ಹೋಗಬೇಕಿದೆ. ಇದಕ್ಕಾಗಿ ಗ್ರಾಮಗಳ ಸರ್ಕಾರಿ ಶಾಲೆಯಲ್ಲಿ ಮುಖ್ಯಮಂತ್ರಿ ವಾಸ್ತವ್ಯ ಮಾಡುತ್ತಾರೆ. ಇದರಲ್ಲಿ ರಾಜಕೀಯ ಮಾಡಬಾರದು ಎಂದು ಹೇಳಿದರು.</p>.<p>‘ನಾನೂ ಇದೇ ಬಗೆಯಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದೇನೆ. ಸದ್ಯದಲ್ಲೇ ದಿನಾಂಕ ಹಾಗೂ ಸ್ಥಳ ನಿಗದಿಪಡಿಸುತ್ತೇನೆ’ ಎಂದರು.</p>.<p>‘ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯುವುದಿಲ್ಲ. ಜೆಡಿಎಸ್ ಹಾಗೂ ಕಾಂಗ್ರೆಸ್ನ ಕೆಲ ಮುಖಂಡರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಅಷ್ಟೆ’ ಎಂದು ನುಡಿದರು.</p>.<p><strong>‘ಬಾಯಿಗೆ ಪ್ಲಾಸ್ಟರ್ ಹಾಕಿಕೊಂಡಿರುವೆ’</strong></p>.<p>ಮದ್ದೂರು: ‘ಬಿಜೆಪಿ ಶಾಸಕ ಶ್ರೀರಾಮುಲು ಮಾಡಿರುವ ಆರೋಪಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ. ಪ್ರತಿಕ್ರಿಯೆ ನೀಡದಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ. ಹೀಗಾಗಿ, ಬಾಯಿಗೆ ಪ್ಲಾಸ್ಟರ್ ಹಾಕಿಕೊಂಡಿದ್ದೇನೆ’ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸೋಮವಾರ ವ್ಯಂಗ್ಯವಾಡಿದರು.</p>.<p>‘ಶ್ರೀರಾಮುಲು ಅಣ್ಣನವರ ಟ್ವೀಟ್ ವಿಚಾರದ ಬಗ್ಗೆ ಮುಂದೊಂದು ದಿನ ಉತ್ತರ ಕೊಡುತ್ತೇನೆ. ಐಎಂಎ ಮುಖ್ಯಸ್ಥ ಮೊಹಮ್ಮದ್ ಮನ್ಸೂರ್ ಖಾನ್ ನನಗೆ ಗೊತ್ತಿಲ್ಲ. ಆತನ ಮಗ ನನ್ನ ಸ್ನೇಹಿತ. ಇನ್ನುಳಿದ ವಿಚಾರಗಳ ಬಗ್ಗೆ ಮಾಹಿತಿ ಇಲ್ಲ’ ಎಂದರು.</p>.<p><strong>ಸಮ್ಮಿಶ್ರ ಸರ್ಕಾರದ ಶಕ್ತಿ ಕುಂದಿಸುವ ಪ್ರಯತ್ನ ಬೇಡ</strong></p>.<p><strong>ಕಲಬುರ್ಗಿ: </strong>‘ಮಧ್ಯಂತರ ಚುನಾವಣೆ ಬರುತ್ತದೆ ಎಂದು ಊಹಾಪೋಹದ ಹೇಳಿಕೆ ನೀಡಿ ಸಮ್ಮಿಶ್ರ ಸರ್ಕಾರದ ಶಕ್ತಿ ಕುಂದಿಸುವ ಪ್ರಯತ್ನವನ್ನು ಯಾರೂ ಮಾಡಬಾರದು’ ಎಂದು ಕಾಂಗ್ರೆಸ್ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದರು.</p>.<p>‘ಕಾಂಗ್ರೆಸ್ ಹೈಕಮಾಂಡ್ ನಿರ್ಧಾರದ ಮೇರೆಗೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದೇವೆ. ಹೀಗಾಗಿ ಮೈತ್ರಿ ಮುರಿದುಕೊಳ್ಳುವ ನಿರ್ಧಾರ ಕೈಗೊಳ್ಳಬೇಕಾಗಿರುವುದು ನಮ್ಮ ಪಕ್ಷದ ಹೈಕಮಾಂಡ್ ಹೊರತು, ನಾವಲ್ಲ’ ಎಂದು ಸೋಮವಾರ ಇಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.</p>.<p>‘ಎಲ್ಲ ನಾಯಕರೂ ಒಟ್ಟಾಗಿ ತೀರ್ಮಾನ ಮಾಡಿ ಮೈತ್ರಿ ಮಾಡಿಕೊಂಡಿರುವುದರಿಂದ ನಾವು ಅದಕ್ಕೆ ಬದ್ಧರಾಗಿ ಸಹಕಾರ ನೀಡಬೇಕು. ಒಂದು ವೇಳೆ ಇಲ್ಲಿ ನಡೆಯುವ ವಿದ್ಯಮಾನಗಳ ಬಗ್ಗೆ ಬೇಸರವಿದ್ದರೆ ಪಕ್ಷದ ಹೈಕಮಾಂಡ್ಗೆ ತಿಳಿಸಲಿ’ ಎಂದರು.</p>.<p><strong>ಪಕ್ಷ ಸಂಘಟನೆಗೆ ಹೊಸ ಮುಖಗಳು</strong></p>.<p><strong>ಮೈಸೂರು:</strong> ‘ಕೆಪಿಸಿಸಿ ಪದಾಧಿಕಾರಿಗಳ ಸಮಿತಿ ವಿಸರ್ಜಿಸಲಾಗಿದೆ. ನೂತನ ಪದಾಧಿಕಾರಿಗಳ ನೇಮಕಾತಿಯಲ್ಲಿ ಹೊಸ ಮುಖಗಳಿಗೆ ಹೆಚ್ಚಿನ ಆದ್ಯತೆ ನೀಡಲು ತೀರ್ಮಾನವಾಗಿದೆ’ ಎಂದು ಸಮ್ಮಿಶ್ರ ಸರ್ಕಾರದ ಸಮ<br />ನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಇಲ್ಲಿ ತಿಳಿಸಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿ, ‘ಹಳಬರು–ಹೊಸಬರ ಸಮ್ಮಿಶ್ರಣ ಕೆಪಿಸಿಸಿಯಲ್ಲಿ ಇರಲಿದೆ. ಮುಂಬರುವ ಚುನಾವಣೆಗಳಿಗೆ ಪಕ್ಷವನ್ನು ಸದೃಢವಾಗಿ ಸಂಘಟಿಸಲು ಈ ಕ್ರಮ ತೆಗೆದುಕೊಳ್ಳಲಾಗಿದೆ’ ಎಂದರು.</p>.<p>‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಯಡಿಯೂರಪ್ಪ ಕಾಣುವ ಕನಸುಗಳಿಗೆ ಯಾರಿಂದಲೂ ಉತ್ತರ ಕೊಡಲು ಆಗಲ್ಲ. ಅವರು ಈ ಹಿಂದೆ ಹೇಳಿದ್ದ ಯಾವೊಂದೂ ಮಾತು ನಿಜವಾಗಿಲ್ಲ. ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ಮಧ್ಯಂತರ ಚುನಾವಣೆಯ ಮಾತಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಎಚ್.ಡಿ.ಕುಮಾರಸ್ವಾಮಿ ಕೇವಲ ಜೆಡಿಎಸ್ ಮುಖ್ಯಮಂತ್ರಿ ಅಲ್ಲ; ಅವರು ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ. ಅವರು ಮಾಡುವ ಒಳ್ಳೆಯ ಕೆಲಸಗಳ ಶ್ರೇಯ ಸಮ್ಮಿಶ್ರ ಸರ್ಕಾರಕ್ಕೂ ಸಿಗುತ್ತದೆ’ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ತಿಳಿಸಿದರು.</p>.<p>ಸುತ್ತೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಗ್ರಾಮ ವಾಸ್ತವ್ಯವನ್ನು ಅವರು ಪ್ರಚಾರಕ್ಕಾಗಿ ಮಾಡುತ್ತಿಲ್ಲ. ಇದರಿಂದ ಗ್ರಾಮದ ಸಮಗ್ರ ಪ್ರಗತಿಯಾಗುತ್ತದೆ. ಇದನ್ನು ಟೀಕಿಸುವ ವಿರೋಧ ಪಕ್ಷಗಳು ರಾಜಕೀಯಕ್ಕೂ ಇತಿಮಿತಿ ಇದೆ ಎಂಬುದನ್ನು ಅರಿಯಬೇಕು’ ಎಂದು ಹೇಳಿದರು.</p>.<p>ಸಮ್ಮಿಶ್ರ ಸರ್ಕಾರದ ಕಾರ್ಯಕ್ರಮಗಳನ್ನು ಜನರ ಬಳಿಗೆ ತೆಗೆದುಕೊಂಡು ಹೋಗಬೇಕಿದೆ. ಇದಕ್ಕಾಗಿ ಗ್ರಾಮಗಳ ಸರ್ಕಾರಿ ಶಾಲೆಯಲ್ಲಿ ಮುಖ್ಯಮಂತ್ರಿ ವಾಸ್ತವ್ಯ ಮಾಡುತ್ತಾರೆ. ಇದರಲ್ಲಿ ರಾಜಕೀಯ ಮಾಡಬಾರದು ಎಂದು ಹೇಳಿದರು.</p>.<p>‘ನಾನೂ ಇದೇ ಬಗೆಯಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದೇನೆ. ಸದ್ಯದಲ್ಲೇ ದಿನಾಂಕ ಹಾಗೂ ಸ್ಥಳ ನಿಗದಿಪಡಿಸುತ್ತೇನೆ’ ಎಂದರು.</p>.<p>‘ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯುವುದಿಲ್ಲ. ಜೆಡಿಎಸ್ ಹಾಗೂ ಕಾಂಗ್ರೆಸ್ನ ಕೆಲ ಮುಖಂಡರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಅಷ್ಟೆ’ ಎಂದು ನುಡಿದರು.</p>.<p><strong>‘ಬಾಯಿಗೆ ಪ್ಲಾಸ್ಟರ್ ಹಾಕಿಕೊಂಡಿರುವೆ’</strong></p>.<p>ಮದ್ದೂರು: ‘ಬಿಜೆಪಿ ಶಾಸಕ ಶ್ರೀರಾಮುಲು ಮಾಡಿರುವ ಆರೋಪಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ. ಪ್ರತಿಕ್ರಿಯೆ ನೀಡದಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ. ಹೀಗಾಗಿ, ಬಾಯಿಗೆ ಪ್ಲಾಸ್ಟರ್ ಹಾಕಿಕೊಂಡಿದ್ದೇನೆ’ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸೋಮವಾರ ವ್ಯಂಗ್ಯವಾಡಿದರು.</p>.<p>‘ಶ್ರೀರಾಮುಲು ಅಣ್ಣನವರ ಟ್ವೀಟ್ ವಿಚಾರದ ಬಗ್ಗೆ ಮುಂದೊಂದು ದಿನ ಉತ್ತರ ಕೊಡುತ್ತೇನೆ. ಐಎಂಎ ಮುಖ್ಯಸ್ಥ ಮೊಹಮ್ಮದ್ ಮನ್ಸೂರ್ ಖಾನ್ ನನಗೆ ಗೊತ್ತಿಲ್ಲ. ಆತನ ಮಗ ನನ್ನ ಸ್ನೇಹಿತ. ಇನ್ನುಳಿದ ವಿಚಾರಗಳ ಬಗ್ಗೆ ಮಾಹಿತಿ ಇಲ್ಲ’ ಎಂದರು.</p>.<p><strong>ಸಮ್ಮಿಶ್ರ ಸರ್ಕಾರದ ಶಕ್ತಿ ಕುಂದಿಸುವ ಪ್ರಯತ್ನ ಬೇಡ</strong></p>.<p><strong>ಕಲಬುರ್ಗಿ: </strong>‘ಮಧ್ಯಂತರ ಚುನಾವಣೆ ಬರುತ್ತದೆ ಎಂದು ಊಹಾಪೋಹದ ಹೇಳಿಕೆ ನೀಡಿ ಸಮ್ಮಿಶ್ರ ಸರ್ಕಾರದ ಶಕ್ತಿ ಕುಂದಿಸುವ ಪ್ರಯತ್ನವನ್ನು ಯಾರೂ ಮಾಡಬಾರದು’ ಎಂದು ಕಾಂಗ್ರೆಸ್ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದರು.</p>.<p>‘ಕಾಂಗ್ರೆಸ್ ಹೈಕಮಾಂಡ್ ನಿರ್ಧಾರದ ಮೇರೆಗೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದೇವೆ. ಹೀಗಾಗಿ ಮೈತ್ರಿ ಮುರಿದುಕೊಳ್ಳುವ ನಿರ್ಧಾರ ಕೈಗೊಳ್ಳಬೇಕಾಗಿರುವುದು ನಮ್ಮ ಪಕ್ಷದ ಹೈಕಮಾಂಡ್ ಹೊರತು, ನಾವಲ್ಲ’ ಎಂದು ಸೋಮವಾರ ಇಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.</p>.<p>‘ಎಲ್ಲ ನಾಯಕರೂ ಒಟ್ಟಾಗಿ ತೀರ್ಮಾನ ಮಾಡಿ ಮೈತ್ರಿ ಮಾಡಿಕೊಂಡಿರುವುದರಿಂದ ನಾವು ಅದಕ್ಕೆ ಬದ್ಧರಾಗಿ ಸಹಕಾರ ನೀಡಬೇಕು. ಒಂದು ವೇಳೆ ಇಲ್ಲಿ ನಡೆಯುವ ವಿದ್ಯಮಾನಗಳ ಬಗ್ಗೆ ಬೇಸರವಿದ್ದರೆ ಪಕ್ಷದ ಹೈಕಮಾಂಡ್ಗೆ ತಿಳಿಸಲಿ’ ಎಂದರು.</p>.<p><strong>ಪಕ್ಷ ಸಂಘಟನೆಗೆ ಹೊಸ ಮುಖಗಳು</strong></p>.<p><strong>ಮೈಸೂರು:</strong> ‘ಕೆಪಿಸಿಸಿ ಪದಾಧಿಕಾರಿಗಳ ಸಮಿತಿ ವಿಸರ್ಜಿಸಲಾಗಿದೆ. ನೂತನ ಪದಾಧಿಕಾರಿಗಳ ನೇಮಕಾತಿಯಲ್ಲಿ ಹೊಸ ಮುಖಗಳಿಗೆ ಹೆಚ್ಚಿನ ಆದ್ಯತೆ ನೀಡಲು ತೀರ್ಮಾನವಾಗಿದೆ’ ಎಂದು ಸಮ್ಮಿಶ್ರ ಸರ್ಕಾರದ ಸಮ<br />ನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಇಲ್ಲಿ ತಿಳಿಸಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿ, ‘ಹಳಬರು–ಹೊಸಬರ ಸಮ್ಮಿಶ್ರಣ ಕೆಪಿಸಿಸಿಯಲ್ಲಿ ಇರಲಿದೆ. ಮುಂಬರುವ ಚುನಾವಣೆಗಳಿಗೆ ಪಕ್ಷವನ್ನು ಸದೃಢವಾಗಿ ಸಂಘಟಿಸಲು ಈ ಕ್ರಮ ತೆಗೆದುಕೊಳ್ಳಲಾಗಿದೆ’ ಎಂದರು.</p>.<p>‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಯಡಿಯೂರಪ್ಪ ಕಾಣುವ ಕನಸುಗಳಿಗೆ ಯಾರಿಂದಲೂ ಉತ್ತರ ಕೊಡಲು ಆಗಲ್ಲ. ಅವರು ಈ ಹಿಂದೆ ಹೇಳಿದ್ದ ಯಾವೊಂದೂ ಮಾತು ನಿಜವಾಗಿಲ್ಲ. ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ಮಧ್ಯಂತರ ಚುನಾವಣೆಯ ಮಾತಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>