ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಟ್ರಾಕ್ಟರ್, ವಾಹನ ಇರುವ ರೈತರು ಬಿಪಿಎಲ್ ಕಾರ್ಡ್ಗಳನ್ನು ಹಿಂದಿರುಗಿಸಬೇಕು, ಇಲ್ಲವಾದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಇದು ಮೂರ್ಖತನದ ಸೂಚನೆ. ರೈತರ ಮೇಲೆ ದೌರ್ಜನ್ಯ ಎಸಗುವ, ಗುಂಡಿಕ್ಕುವ, ಕಾನೂನು ಕ್ರಮದ ಅಸ್ತ್ರ ಪ್ರಯೋಗಿಸಲು ಈ ಸರ್ಕಾರ ತುದಿಗಾಲಿನ ಮೇಲೆ ನಿಂತಂತೆ ಕಾಣುತ್ತಿದೆ,’ ಎಂದಿದ್ದಾರೆ.