ಬೆಂಗಳೂರು: ಪಾದರಾಯನಪುರ ಗಲಭೆಕೋರರ ವಿಚಾರಕ್ಕೆ ಸಂಬಂಧಿಸಿ ಸಚಿವ ಜಗದೀಶ ಶೆಟ್ಟರ್ ತಮ್ಮ ವಿರುದ್ಧ ಮಾಡಿರುವ ಟೀಕೆಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಸರಣಿ ಟ್ವೀಟ್ ಮಾಡಿರುವ ಅವರು, ‘ಜಗದೀಶ್ ಶೆಟ್ಟರ್ ಅವರೇ, ಪಾದರಾಯನಪುರ ಗಲಭೆಕೋರರನ್ನು ರಾಮನಗರ ಜೈಲಿಗೆ ಸ್ಥಳಾಂತರ ಮಾಡುವ ವಿಷಯದಲ್ಲಿ ಎಡಬಿಡಂಗಿತನ ಮತ್ತು ರಾಜಕಾರಣ ಮಾಡಿದ್ದು ನಿಮ್ಮದೇ ಬಿಜೆಪಿ ಸರ್ಕಾರ ಎಂಬುದು ನಿಮಗೆ ಗೊತ್ತಿಲ್ಲವೇ?’ ಎಂದು ಪ್ರಶ್ನಿಸಿದ್ದಾರೆ.
‘ನಾನು ಸಣ್ಣ ರಾಜಕಾರಣ ಮಾಡುತ್ತೇನೆ ಎಂದು ದೂಷಿಸುವ ನಿಮ್ಮ ಸರ್ಕಾರ ಮತ್ಯಾಕೆ ಯು-ಟರ್ನ್ ತೆಗೆದುಕೊಂಡು ಕೈದಿಗಳನ್ನು ಬೆಂಗಳೂರಿಗೆ ಸ್ಥಳಾಂತರಿಸಿತು? ಮೊದಲೇ ಈ ಕೆಲಸ ಮಾಡಿದ್ದರೆ, ನಿಮ್ಮ ಸರ್ಕಾರಕ್ಕೊಂದು ಮರ್ಯಾದೆ ಇರುತ್ತಿತ್ತು’ ಎಂದು ಕುಮಾರಸ್ವಾಮಿ ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.
‘ರಾಮನಗರ ಜಿಲ್ಲೆಯ ಜನತೆಯಲ್ಲಿ ಆತಂಕ ಸೃಷ್ಟಿಸಿ ಬಿಜೆಪಿ ಸರ್ಕಾರ ಸಾಧಿಸಿದ್ದಾದರೂ ಏನನ್ನು? ರೋಗ ನಿಯಂತ್ರಿಸಬೇಕಾದ ಸರ್ಕಾರವೇ ರೋಗ ಹಂಚಿದ್ದು ಸರ್ಕಾರದ ವೈಫಲ್ಯ ಅಲ್ಲದೆ ಮತ್ತೇನು? ನಿಮ್ಮದು ಸಣ್ಣ ರಾಜಕಾರಣ. ನನ್ನದಲ್ಲ’ ಎಂದು ಮತ್ತೊಂದು ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.
ಜಗದೀಶ್ ಶೆಟ್ಟರ್ ಅವರೇ, ಪಾದರಾಯನಪುರ ಗಲಭೆಕೋರರನ್ನು ರಾಮನಗರ ಜೈಲಿಗೆ ಸ್ಥಳಾಂತರ ಮಾಡುವ ವಿಷಯದಲ್ಲಿ ಎಡಬಿಡಂಗಿತನ ಮತ್ತು ರಾಜಕಾರಣ ಮಾಡಿದ್ದು ನಿಮ್ಮದೇ ಬಿಜೆಪಿ ಸರ್ಕಾರ ಎಂಬುದು ನಿಮಗೆ ಗೊತ್ತಿಲ್ಲವೇ? 1/4