<p><strong>ಚನ್ನಪಟ್ಟಣ:</strong> ಮಂಡ್ಯ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚಳಕ್ಕೆ ನಿರ್ಲಕ್ಷ್ಯ ಕಾರಣ ಎಂದು ಶಾಸಕ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದರು.</p>.<p>ಚನ್ನಪಟ್ಟಣದ ಗೋವಿಂದಹಳ್ಳಿ ಗ್ರಾಮದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ಒಂದೇ ದಿನದಲ್ಲಿ 62 ಕೊರೊನಾ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿ ಕೊರೊನಾ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿರುವ ಬಗ್ಗೆ ಹಿಂದೆಯೇ ಎಚ್ಚರಿಕೆ ನೀಡಲಾಗಿತ್ತು. ಅದನ್ನು ಲಘುವಾಗಿ ಪರಿಗಣಿಸಿದ್ದರಿಂದ ಇದೀಗ ಅನಾಹುತ ಹೆಚ್ಚಾಗುತ್ತಿದೆ ಎಂದರು.</p>.<p>ಮುಂಬೈಯಿಂದ ಬಂದ ಇನ್ನೂ 900 ಮಂದಿಯ ವರದಿ ಬರಬೇಕಿದೆ. ವರದಿ ಬಂದಾಗ ಇನ್ನೆಷ್ಟು ಮಂದಿಗೆ ಕೊರೊನಾ ಪಾಸಿಟಿವ್ ಬರಲಿದೆಯೋ ತಿಳಿಯುತ್ತಿಲ್ಲ ಎಂದು ಅವರು ಆತಂಕ ವ್ಯಕ್ತಪಡಿಸಿದರು.</p>.<p>ರಾಮನಗರ ಜಿಲ್ಲೆ ಮಂಡ್ಯ ಜಿಲ್ಲೆಯ ಗಡಿಯಲ್ಲೇ ಇರುವುದರಿಂದ ಇಲ್ಲಿನ ಅಧಿಕಾರಿಗಳು ಮೈಮರೆಯಬಾರದು. ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು. ಇದರ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ:</strong> ಮಂಡ್ಯ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚಳಕ್ಕೆ ನಿರ್ಲಕ್ಷ್ಯ ಕಾರಣ ಎಂದು ಶಾಸಕ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದರು.</p>.<p>ಚನ್ನಪಟ್ಟಣದ ಗೋವಿಂದಹಳ್ಳಿ ಗ್ರಾಮದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ಒಂದೇ ದಿನದಲ್ಲಿ 62 ಕೊರೊನಾ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿ ಕೊರೊನಾ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿರುವ ಬಗ್ಗೆ ಹಿಂದೆಯೇ ಎಚ್ಚರಿಕೆ ನೀಡಲಾಗಿತ್ತು. ಅದನ್ನು ಲಘುವಾಗಿ ಪರಿಗಣಿಸಿದ್ದರಿಂದ ಇದೀಗ ಅನಾಹುತ ಹೆಚ್ಚಾಗುತ್ತಿದೆ ಎಂದರು.</p>.<p>ಮುಂಬೈಯಿಂದ ಬಂದ ಇನ್ನೂ 900 ಮಂದಿಯ ವರದಿ ಬರಬೇಕಿದೆ. ವರದಿ ಬಂದಾಗ ಇನ್ನೆಷ್ಟು ಮಂದಿಗೆ ಕೊರೊನಾ ಪಾಸಿಟಿವ್ ಬರಲಿದೆಯೋ ತಿಳಿಯುತ್ತಿಲ್ಲ ಎಂದು ಅವರು ಆತಂಕ ವ್ಯಕ್ತಪಡಿಸಿದರು.</p>.<p>ರಾಮನಗರ ಜಿಲ್ಲೆ ಮಂಡ್ಯ ಜಿಲ್ಲೆಯ ಗಡಿಯಲ್ಲೇ ಇರುವುದರಿಂದ ಇಲ್ಲಿನ ಅಧಿಕಾರಿಗಳು ಮೈಮರೆಯಬಾರದು. ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು. ಇದರ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>