ನನ್ನ ಹಾಗೂ ನಮ್ಮ ಕುಟುಂಬದ ಬಗ್ಗೆ ಅವರ ಬಳಿ ದಾಖಲೆ ಇದ್ದರೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ ರೇವಣ್ಣ, ನನಗೆ ಯಡಿಯೂರಪ್ಪ ಅವರ ಮನೆ ಬಾಗಿಲಿಗೆ ಹೋಗೋ ಅವಶ್ಯತೆ ಬಂದಿಲ್ಲ ಎಂದರು. ದೇವೇಗೌಡರ ಕಾಲದಿಂದಲೂ ನಾನು ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದೇನೆ ಎಂದ ರೇವಣ್ಣ, ಆಪರೇಷನ್ ಕಮಲ ಆಡಿಯೊ ಬಗ್ಗೆ ಎಸ್ಐಟಿ ತನಿಖೆ ಆಗಲೇಬೇಕು ಎಂದು ಒತ್ತಾಯಿಸಿದರು.