ಚಾಮುಂಡೇಶ್ವರಿ ದರ್ಶನ ಪಡೆದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಎಚ್.ಡಿ.ರೇವಣ್ಣ, ‘ಕುಮಾರಸ್ವಾಮಿ ಅವರಿಗೆ ದೇವರು ಆಶೀರ್ವಾದ ಮಾಡಿ ಕೊಟ್ಟಿರುವ ಸರ್ಕಾರ ಇದು. ಏನು ಮಾಡಿದ್ರೂ ಬಿದ್ದು ಹೋಗಲ್ಲ. ಉಳಿಯುತ್ತೆ’ ಎಂದು ಆತ್ಮವಿಶ್ವಾಸ ಪ್ರದರ್ಶಿಸಿದರು. ‘ನಮ್ಮ ಬಗ್ಗೆ ಮಾತನಾಡಿಲ್ಲ ಅಂದ್ರೆ ಕೆಲವರಿಗೆ ಊಟ ಸೇರಲ್ಲ’ ಎಂದು ಆಕ್ಷೇಪಿಸಿದರು