ಕಾಂಗ್ರೆಸ್ ಶಾಸಕ ರಮೇಶ ಜಾರಕಿಹೊಳಿ ಇತ್ತೀಚೆಗೆ ಕಾಂಗ್ರೆಸ್ಗೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಅಲ್ಲದೆ, ತಮ್ಮ ಜತೆ ಇನ್ನೂ ಕೆಲವು ಶಾಸಕರು ಇದ್ದಾರೆ ಎಂದು ಹೇಳಿದ್ದರಿಂದ, ಆತಂಕಕ್ಕೆ ಒಳಗಾಗಿರುವ ದೇವೇಗೌಡ ಅವರು ಪಕ್ಷದ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಉದ್ದೇಶದಿಂದ ಈ ಸಭೆ ಕರೆದರು ಎಂದೂ ಮೂಲಗಳು ಹೇಳಿವೆ.