ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಒಕ್ಕಲಿಗರ ಸಂಘದ ಆಡಳಿತಾಧಿಕಾರಿ ಅಶೋಕ್ ಆನಂದ ಅವರನ್ನು ಸರ್ಕಾರ ಬದಲಾವಣೆ ಮಾಡಿ, ಶಂಕರಲಿಂಗೇಗೌಡ ಅವರನ್ನು ನೇಮಿಸಿದೆ. ಶಂಕರಲಿಂಗೇಗೌಡರ ನೇಮಕಕ್ಕೆ ವಿರೋಧ ವ್ಯಕ್ತಪಡಿಸುತ್ತಿಲ್ಲ. ದಕ್ಷ ಅಧಿಕಾರಿಯಾಗಿದ್ದ ಅಶೋಕ್ ಅವರು ಸಂಸ್ಥೆಗೆ ಮರು ಜೀವ ನೀಡಿದ್ದರು. ಆದರೆ, ಅವರ ವಿರುದ್ಧ ಯಾರು ಆರೋಪ ಮಾಡಿದ್ದಾರೆ ಎಂಬುದನ್ನು ಸರ್ಕಾರ ಸಾರ್ವಜನಿಕರಿಗೆ ಬಹಿರಂಗಪಡಿಸಬೇಕು’ ಎಂದು ಆಗ್ರಹಿಸಿದರು.