ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಯಮ ಪಾಲಿಸಿದರೂ ಮಾಧ್ಯಮಗಳಲ್ಲಿ ವಿಷಕಾರಿದ ಮನಸ್ಸುಗಳು: ಎಚ್‌ಡಿಕೆ ಟ್ವೀಟ್

Last Updated 19 ಏಪ್ರಿಲ್ 2020, 7:39 IST
ಅಕ್ಷರ ಗಾತ್ರ

ಬೆಂಗಳೂರು: ನನ್ನ ಪುತ್ರ ನಿಖಿಲ್‌ ವಿವಾಹದಲ್ಲಿ ಅಂತರ ಕಾಯ್ದುಕೊಂಡರೂ, ನಿಯಮ ಪಾಲಿಸಿದರೂ ಇದ್ಯಾವುದೂ ಪಾಲನೆ ಆಗಿಲ್ಲ ಎಂಬ ಚರ್ಚೆಗಳು ನಡೆದವು. ರಾಜಕೀಯ ದ್ವೇಷಕ್ಕಾಗಿ ಶುಭ ಸಮಾರಂಭದ ವಿಷಯದಲ್ಲೂ ವಿಷ ಕಾರುವ ಮನಸ್ಥಿತಿಗಳು ರಾರಾಜಿಸಿವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

ತಮ್ಮ ಟ್ವೀಟ್‌ನಲ್ಲಿ ಈ ಬಗ್ಗೆ ತಿಳಿಸಿರುವ ಅವರು, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಇವೆಲ್ಲವನ್ನೂ ನಿರಾಕರಿಸುವ ಮೂಲಕ ಸತ್ಯದ ಪರ ನಿಂತಿದ್ದಾರೆ.ರಾಜ್ಯರಾಜಕಾರಣದ ದೊಡ್ಡ ಕುಟುಂಬ ಸರಳವಾಗಿ ವಿವಾಹ ಸಮಾರಂಭ ಮಾಡಿದೆ ಎಂದೂ ಯಡಿಯೂರಪ್ಪ ಅವರು ಸಹೃದಯದ ಮಾತುಗಳನ್ನಾಡಿರುವುದಕ್ಕೆ ಅವರಿಗೆ ಮನದಾಳದ ಧನ್ಯವಾದಗಳನ್ನು ತಿಳಿಸಿದ್ದಾರೆ.

ನನ್ನ ಒಡನಾಡಿಗಳು, ನನ್ನ ಹಿತೈಷಿಗಳು, ನನ್ನ ಜನ, ನನ್ನ ಕಾರ್ಯಕರ್ತರು ಇವರೆಲ್ಲರೊಂದಿಗೆ ಶುಭ ಸಮಾರಂಭವೊಂದರಲ್ಲಿ ಒಟ್ಟಿಗೆ ಸೇರಲು ವೈಯಕ್ತಿಕವಾಗಿ ನನಗೆ ಇದ್ದ ಒಂದೇ ಒಂದು ಸುವರ್ಣ ಅವಕಾಶವನ್ನು ಕೈಚೆಲ್ಲಿ ನಿಖಿಲ್‌ ವಿವಾಹವನ್ನು ಲಾಕ್‌ಡೌನ್‌ ನಿಯಮಗಳನ್ನು ಪಾಲಿಸಿ ಸರಳವಾಗಿ ಮಾಡಲಾಯಿತು.

ನಿಖಿಲ್‌ ವಿವಾಹದಲ್ಲೂ ರಾಜಕೀಯ ಹುಡುಕಿದ ‘ಸಾಮಾಜಿಕ ಮಾಧ್ಯಮ’ದ ಕೆಲವು ಹುಳುಕು ಮನಸ್ಸಿನ ಮಂದಿ ತಮ್ಮ ಮನದಲ್ಲಿರುವ ವಿಷ ಕಾರಿಕೊಂಡಿದ್ದಾರೆ. ಅವರೆಲ್ಲರೂ ಶರಣರ ಈ ಮಾತನ್ನು ನೆನಪಲ್ಲಿಟ್ಟುಕೊಳ್ಳಬೇಕು.

"ಮನದ ಕೋಪ ತನ್ನ ಅರಿವಿನ ಕೇಡು
ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ
ನೆರೆಮನೆಯ ಸುಡದು ಕೂಡಲಸಂಗಮದೇವಾ"

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT