ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಗ್ಯ ಮತ್ತು ಕುಟುಂಬ ಕಲ್ಯಾಣಕ್ಕೆ ಆದ್ಯತೆ

Last Updated 8 ಫೆಬ್ರುವರಿ 2019, 19:34 IST
ಅಕ್ಷರ ಗಾತ್ರ

ಬೆಂಗಳೂರು: ಬಜೆಟ್‌ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ನೀಡಿರುವ ಅನುದಾನ ವಿವರ.

* ಆಯುಷ್ಮಾನ್ ಭಾರತ್ ಆರೋಗ್ಯ ‌ಕರ್ನಾಟಕ ಯೋಜನೆಗೆ ₹ 950 ಕೋಟಿ.

* ಶಿವಮೊಗ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಮಂಗನ ಕಾಯಿಲೆ ಸಂಶೋಧನಾ ಮತ್ತು ಚಿಕಿತ್ಸಾ ಘಟಕ ಪ್ರಾರಂಭ.

* ತುಮಕೂರು ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ₹ 60 ಕೋಟಿ ವೆಚ್ಚದಲ್ಲಿ ಕ್ಯಾನ್ಸರ್ ಆಸ್ಪತ್ರೆ.

* ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ₹ 50 ಕೋಟಿ.

* ವಿಜಯಪುರ ಜಿಲ್ಲೆಯಲ್ಲಿ ಸಂಜಯಗಾಂಧಿ ಟ್ರಾಮ ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆ ಪ್ರಾರಂಭಿಸಲು ₹ 40 ಕೋಟಿ.

* ₹ 10 ಕೋಟಿ ವೆಚ್ಚದಲ್ಲಿ ನಾಲ್ಕು ವಿಭಾಗೀಯ ಮಾದರಿ ರಕ್ತನಿಧಿ ಕೇಂದ್ರಗಳ ಸ್ಥಾಪನೆ.

* ದೊಡ್ಡಬಳ್ಳಾ‍ಪುರ ತಾಲ್ಲೂಕು ಆಸ್ಪತ್ರೆಯ ಮೇಲ್ದರ್ಜೆಗೇರಿಸಲು (250 ಹಾಸಿಗೆಗಳಿರುವಂತೆ) ₹ 10 ಕೋಟಿ.

* ಆಯ್ದ 11 ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ₹ 2 ಕೋಟಿ ವೆಚ್ಚದಲ್ಲಿ ಡಿಎನ್‌ಬಿ ಕೇಂದ್ರಗಳ ಸ್ಥಾಪನೆ

* ಬೆಂಗಳೂರಿನ ಸಂಜಯಗಾಂಧಿ ಟ್ರಾಮ ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆಯಲ್ಲಿ ಕ್ರೀಡಾ ರೋಗಿಗಳ ವಿಭಾಗ ಆರಂಭ. ರೋಬೋಟಿಕ್ ಶಸ್ತ್ರ ಚಿಕಿತ್ಸಾ ಸೌಲಭ್ಯಕ್ಕೆ ₹ 10 ಕೋಟಿ.

* ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಆರೈಕೆಗಾಗಿ 49 ತಾಲ್ಲೂಕು ಆಸ್ಪತ್ರೆಗಳಲ್ಲಿ ₹ 1 ಕೋಟಿ ವೆಚ್ಚದಲ್ಲಿ ‘ಪೌಷ್ಟಿಕ ಪುನಶ್ಚೇತನ ಕೇಂದ್ರ’ಗಳ ಸ್ಥಾಪನೆ.

* ಸರ್ಕಾರಿ ಹಾಗೂ ಖಾಸಗಿ ಸ್ವಾಮ್ಯದ ಕ್ಷ–ಕಿರಣ ಕೇಂದ್ರಗಳ ಸುರಕ್ಷತೆಯನ್ನು ‘ಅಟಾಮಿಕ್ ಎನರ್ಜಿ ರೀಸರ್ಚ್ ಬೋರ್ಡ್‌’ ಮಾರ್ಗದರ್ಶನದಂತೆ ಮಾಡುವ ನಿಟ್ಟಿನಲ್ಲಿ ಕ್ಷ-ಕಿರಣ ಸುರಕ್ಷತಾ ನಿರ್ದೇಶನಾಲಯ ಸ್ಥಾಪನೆ.

* ಮಂಗಳೂರು, ತುಮಕೂರು, ವಿಜಯಪುರ, ಚಿತ್ರದುರ್ಗ, ದಾವಣಗೆರೆ, ಬಾಗಲಕೋಟೆ, ಚಿಕ್ಕಮಗಳೂರು, ಹಾವೇರಿ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ₹ 10 ಕೋಟಿ ವೆಚ್ಚದಲ್ಲಿ ಡಿಜಿಟಲ್ ಸ್ತನರೇಖನ ವ್ಯವಸ್ಥೆ (ಮ್ಯಾಮೋಗ್ರಾಮ್) ಹಾಗೂ ಪ್ಯಾಪ್ ಸ್ಮಿಯರ್ ವ್ಯವಸ್ಥೆ ಪ್ರಾರಂಭ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT