ಇಲ್ಲಿನ ಎಸ್.ನಿಜಲಿಂಗಪ್ಪ ವೈದ್ಯಕೀಯ ಕಾಲೇಜಿನಲ್ಲಿ ಶುಕ್ರವಾರ ಆರಂಭವಾದ ರಾಜ್ಯಮಟ್ಟದ ಪೆಥಾಲಜಿ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ‘ಆರೋಗ್ಯ ಇಲಾಖೆಯ ಬಳಿ ಆಸ್ಪತ್ರೆಗಳಿವೆ. ಆದರೆ ಅಲ್ಲಿ ಗುಣಮಟ್ಟದ ಚಿಕಿತ್ಸೆ ಕೊಡಬೇಕಾದರೆ, ವೈದ್ಯಕೀಯ ಕಾಲೇಜುಗಳ ನೆರವು ಬೇಕಿದೆ. ಈಗ ಅದು ಸಾಧ್ಯವಾಗುತ್ತಿಲ್ಲ. ಎರಡೂ ಇಲಾಖೆಗಳನ್ನು ಜೋಡಣೆ ಮಾಡಿದರೆ ಏನಾದರೂ ಸಾಧನೆ ಸಾಧ್ಯ. ಮುಂದಿನ ದಿನಗಳಲ್ಲಿ ಈ ಗೊಂದಲ ಯಾವ ರೀತಿ ಸರಿಪಡಿಸಬೇಕು ಎಂಬುದರ ಬಗ್ಗೆ ಸಮಾಲೋಚನೆ ಅಗತ್ಯವಿದೆ’ ಎಂದರು.