‘ಸಮ್ಮಿಶ್ರ ಸರ್ಕಾರದಲ್ಲಿ ನಮ್ಮ ಯಾವುದೇ ಕೆಲಸಗಳು ಆಗಲಿಲ್ಲ. ಮುಖ್ಯಮಂತ್ರಿಯಾಗಿದ್ದ ಎಚ್.ಡಿ. ಕುಮಾರಸ್ವಾಮಿ ಸ್ಪಂದಿಸಲಿಲ್ಲ. ಬತ್ತಿ ಹೋಗಿದ್ದ ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ ನೀರು ಬಿಡಿಸುವುದಕ್ಕೂ ಸಾಧ್ಯವಾಗಲಿಲ್ಲ. ನನ್ನ ಕಾಗವಾಡ ಕ್ಷೇತ್ರದ ಜನರು ಕುಡಿಯುವ ನೀರಿಗಾಗಿ ಪರದಾಡುತ್ತಿದ್ದರೂ ಸರ್ಕಾರ ಕ್ರಮ ವಹಿಸಲಿಲ್ಲ. ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿತ್ತು. ಹೀಗಾಗಿ, ಬೇಸರದಿಂದ ಸರ್ಕಾರದ ವಿರುದ್ಧ ನಿರ್ಧಾರ ಮಾಡಬೇಕಾಯಿತು’ ಎಂದರು.