<p><strong>ಬೆಳಗಾವಿ:</strong> ಜಿಲ್ಲೆಯಾದ್ಯಂತ ಮಂಗಳವಾರವೂ ಧಾರಾಕಾರ ಮಳೆ ಮುಂದುವರಿದಿದೆ. ರಾತ್ರಿಯಿಡೀ ಸುರಿದ ಮಳೆಯು ಬೆಳಿಗ್ಗೆಯೂ ಮುಂದುವರೆದಿದ್ದು ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ.</p>.<p>ರಾಜ್ಯದಿಂದ ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ. ರಸ್ತೆಯ ಮೇಲೆ ನೀರು ಪ್ರವಾಹದಂತೆ ಹರಿಯುತ್ತಿರುವುದರಿಂದ ರಸ್ತೆ ಬಂದ್ ಮಾಡಲಾಗಿದೆ.</p>.<p>ಜಿಲ್ಲೆಯಲ್ಲಿ ಹರಿಯುವ ಕೃಷ್ಣಾ, ವೇದಗಂಗಾ, ದೂಧ್ಗಂಗಾ, ಮಾರ್ಕಂಡೇಯ, ಪಂಚಗಂಗಾ, ಘಟಪ್ರಭಾ, ಮಲಪ್ರಭಾ ನದಿಗಳು ಉಕ್ಕೇರಿ ಹರಿಯುತ್ತಿವೆ. ನದಿ ಪಾತ್ರದ ಗ್ರಾಮಗಳಲ್ಲಿ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ. ಹಲವು ರಸ್ತೆಗಳು, ಸೇತುವೆಗಳು ಜಲಾವೃತವಾಗಿದ್ದು, ಇತರ ನಗರಗಳ ಜೊತೆಗಿನ ಸಂಪರ್ಕ ಕಡಿತಗೊಂಡಿದೆ.</p>.<p>ಪ್ರವಾಹ ಪೀಡಿತ ಕೃಷ್ಣಾ ನದಿ ತೀರದ ಚಿಕ್ಕೋಡಿ, ಅಥಣಿ, ರಾಯಬಾಗ ತಾಲ್ಲೂಕಿನ ಹಳ್ಳಿಗಳ ಜನರನ್ನು ರಾಜ್ಯದ ಪ್ರಕೃತಿ ವಿಕೋಪ ಪರಿಹಾರ ಪಡೆಯ ಸಿಬ್ಬಂದಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುತ್ತಿದ್ದಾರೆ.</p>.<p>ಮಲಪ್ರಭಾ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ ಮುಂದುವರಿದಿದೆ. ಮಲಪ್ರಭಾ ಉಗಮಸ್ಥಳವಾಗಿರುವ ಇತರ ನಗರಗಳ ಜೊತೆ ಖಾನಾಪುರ ಪಟ್ಟಣದ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಬೆಳಗಾವಿ, ಜಾಂಬೋಟಿ, ಪಾರಿಶ್ವಾಡ, ನಂದಗಡ, ಲೋಂಡಾ ರಸ್ತೆ ಜಲಾವೃತವಾಗಿದ್ದು, ಸಂಪರ್ಕ ಕಡಿತಗೊಂಡಿದೆ.</p>.<p>ಪಾಂಡರಿ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ಲೋಂಡಾ ಗ್ರಾಮದೊಳಗೆ ನೀರು ನುಗ್ಗಿದೆ. ಗ್ರಾಮವು ಭಾಗಶಃ ಜಲಾವೃತವಾಗಿದೆ.</p>.<p>ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದ್ದು, ಗೋಕಾಕ– ಸಂಕೇಶ್ವರ ರಸ್ತೆಯ ಲೊಳಸೂರ ಸೇತುವೆ ಮುಳುಗಡೆಯಾಗಿದೆ. ಗೋಕಾಕ ಹೊರವಲಯದ ಮೂಲಕ ಸಾಗುವ ಜತ್- ಜಾಂಬೋಟಿ ಅಂತರ್ ರಾಜ್ಯ ಹೆದ್ದಾರಿ ಭಾಗವಾಗಿರುವ ಲೋಳಸೂರ ಸೇತುವೆಯು ಬೆಳಗಿನ ಜಾವದಿಂದಲೇ ಘಟಪ್ರಭೆಯ ಪ್ರವಾಹದಲ್ಲಿ ಮುಳುಗಿ ವಾಹನ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ.</p>.<p>ಗೋಕಾಕದಿಂದ ಗೋಕಾಕ್ ಫಾಲ್ಸ್ ಕಡೆಗೆ ಸಂಪರ್ಕ ಕಲ್ಪಿಸುವ ಚಿಕ್ಕೋಳಿ ಸೇತುವೆಯ ಮೇಲೆ ನೀರು ಹರಿಯುತ್ತಿದೆ.</p>.<p>ಬೈಲಹೊಂಗಲ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಮಳೆಯ ಅಬ್ಬರ ಮುಂದುವರಿದಿದೆ. ಮಲಪ್ರಭಾ ನದಿಗೆ ಹೆಚ್ಚಿನ ಹರಿವು ಬಂದಿದ್ದು, ನಯಾನಗರ ಬಳಿಯ ಹೊಲಗಳಿಗೆ ನೀರು ನುಗ್ಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಜಿಲ್ಲೆಯಾದ್ಯಂತ ಮಂಗಳವಾರವೂ ಧಾರಾಕಾರ ಮಳೆ ಮುಂದುವರಿದಿದೆ. ರಾತ್ರಿಯಿಡೀ ಸುರಿದ ಮಳೆಯು ಬೆಳಿಗ್ಗೆಯೂ ಮುಂದುವರೆದಿದ್ದು ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ.</p>.<p>ರಾಜ್ಯದಿಂದ ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ. ರಸ್ತೆಯ ಮೇಲೆ ನೀರು ಪ್ರವಾಹದಂತೆ ಹರಿಯುತ್ತಿರುವುದರಿಂದ ರಸ್ತೆ ಬಂದ್ ಮಾಡಲಾಗಿದೆ.</p>.<p>ಜಿಲ್ಲೆಯಲ್ಲಿ ಹರಿಯುವ ಕೃಷ್ಣಾ, ವೇದಗಂಗಾ, ದೂಧ್ಗಂಗಾ, ಮಾರ್ಕಂಡೇಯ, ಪಂಚಗಂಗಾ, ಘಟಪ್ರಭಾ, ಮಲಪ್ರಭಾ ನದಿಗಳು ಉಕ್ಕೇರಿ ಹರಿಯುತ್ತಿವೆ. ನದಿ ಪಾತ್ರದ ಗ್ರಾಮಗಳಲ್ಲಿ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ. ಹಲವು ರಸ್ತೆಗಳು, ಸೇತುವೆಗಳು ಜಲಾವೃತವಾಗಿದ್ದು, ಇತರ ನಗರಗಳ ಜೊತೆಗಿನ ಸಂಪರ್ಕ ಕಡಿತಗೊಂಡಿದೆ.</p>.<p>ಪ್ರವಾಹ ಪೀಡಿತ ಕೃಷ್ಣಾ ನದಿ ತೀರದ ಚಿಕ್ಕೋಡಿ, ಅಥಣಿ, ರಾಯಬಾಗ ತಾಲ್ಲೂಕಿನ ಹಳ್ಳಿಗಳ ಜನರನ್ನು ರಾಜ್ಯದ ಪ್ರಕೃತಿ ವಿಕೋಪ ಪರಿಹಾರ ಪಡೆಯ ಸಿಬ್ಬಂದಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುತ್ತಿದ್ದಾರೆ.</p>.<p>ಮಲಪ್ರಭಾ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ ಮುಂದುವರಿದಿದೆ. ಮಲಪ್ರಭಾ ಉಗಮಸ್ಥಳವಾಗಿರುವ ಇತರ ನಗರಗಳ ಜೊತೆ ಖಾನಾಪುರ ಪಟ್ಟಣದ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಬೆಳಗಾವಿ, ಜಾಂಬೋಟಿ, ಪಾರಿಶ್ವಾಡ, ನಂದಗಡ, ಲೋಂಡಾ ರಸ್ತೆ ಜಲಾವೃತವಾಗಿದ್ದು, ಸಂಪರ್ಕ ಕಡಿತಗೊಂಡಿದೆ.</p>.<p>ಪಾಂಡರಿ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ಲೋಂಡಾ ಗ್ರಾಮದೊಳಗೆ ನೀರು ನುಗ್ಗಿದೆ. ಗ್ರಾಮವು ಭಾಗಶಃ ಜಲಾವೃತವಾಗಿದೆ.</p>.<p>ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದ್ದು, ಗೋಕಾಕ– ಸಂಕೇಶ್ವರ ರಸ್ತೆಯ ಲೊಳಸೂರ ಸೇತುವೆ ಮುಳುಗಡೆಯಾಗಿದೆ. ಗೋಕಾಕ ಹೊರವಲಯದ ಮೂಲಕ ಸಾಗುವ ಜತ್- ಜಾಂಬೋಟಿ ಅಂತರ್ ರಾಜ್ಯ ಹೆದ್ದಾರಿ ಭಾಗವಾಗಿರುವ ಲೋಳಸೂರ ಸೇತುವೆಯು ಬೆಳಗಿನ ಜಾವದಿಂದಲೇ ಘಟಪ್ರಭೆಯ ಪ್ರವಾಹದಲ್ಲಿ ಮುಳುಗಿ ವಾಹನ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ.</p>.<p>ಗೋಕಾಕದಿಂದ ಗೋಕಾಕ್ ಫಾಲ್ಸ್ ಕಡೆಗೆ ಸಂಪರ್ಕ ಕಲ್ಪಿಸುವ ಚಿಕ್ಕೋಳಿ ಸೇತುವೆಯ ಮೇಲೆ ನೀರು ಹರಿಯುತ್ತಿದೆ.</p>.<p>ಬೈಲಹೊಂಗಲ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಮಳೆಯ ಅಬ್ಬರ ಮುಂದುವರಿದಿದೆ. ಮಲಪ್ರಭಾ ನದಿಗೆ ಹೆಚ್ಚಿನ ಹರಿವು ಬಂದಿದ್ದು, ನಯಾನಗರ ಬಳಿಯ ಹೊಲಗಳಿಗೆ ನೀರು ನುಗ್ಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>