ಜಿಲ್ಲೆಯಲ್ಲಿ ಹರಿಯುವ ಕೃಷ್ಣಾ, ವೇದಗಂಗಾ, ದೂಧ್ಗಂಗಾ, ಮಾರ್ಕಂಡೇಯ, ಪಂಚಗಂಗಾ, ಘಟಪ್ರಭಾ, ಮಲಪ್ರಭಾ ನದಿಗಳು ಉಕ್ಕೇರಿ ಹರಿಯುತ್ತಿವೆ. ನದಿ ಪಾತ್ರದ ಗ್ರಾಮಗಳಲ್ಲಿ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ. ಹಲವು ರಸ್ತೆಗಳು, ಸೇತುವೆಗಳು ಜಲಾವೃತವಾಗಿದ್ದು, ಇತರ ನಗರಗಳ ಜೊತೆಗಿನ ಸಂಪರ್ಕ ಕಡಿತಗೊಂಡಿದೆ.