ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ತಪ್ಪಿಲ್ಲ. ಮುಂಗಾರು ಮಳೆ ಜೋರು ಪಡೆದುಕೊಳ್ಳಬೇಕಾದ ಸಮಯದಲ್ಲೂ ಟ್ಯಾಂಕರ್ಗಳಲ್ಲಿ ನೀರು ಸರಬರಾಜು ಮಾಡಲಾಗುತ್ತಿದೆ. ಮೈಸೂರು, ಹಾಸನ, ದಾವಣಗೆರೆ, ಚಾಮರಾಜನಗರ ಜಿಲ್ಲೆಗಳ ಕೆಲವು ಹಳ್ಳಿಗಳಿಗೆ ಮಾತ್ರ ಟ್ಯಾಂಕರ್ ನೀರು ಕೊಡಲಾಗುತ್ತಿದೆ.