ಮೂರು ದಿನ ಮಳೆ ಮುನ್ಸೂಚನೆ
ಕಾರವಾರ: ಉತ್ತರಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ನಿನ್ನೆಯಿಂದ ಉತ್ತಮ ಮಳೆಯಾಗುತ್ತಿದೆ. ಶನಿವಾರ ಬೆಳಿಗ್ಗೆಯಿಂದಲೇ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಭಟ್ಕಳ, ಹೊನ್ನಾವರ ಭಾಗದಲ್ಲಿ ಆಗಾಗ ರಭಸದ ಗಾಳಿಯೂ ಬೀಸುತ್ತಿದೆ. ಶಿರಸಿ, ಸಿದ್ದಾಪುರ ಸೇರಿದಂತೆ ಮಲೆನಾಡು ಭಾಗದಲ್ಲೂ ಪುನರ್ವಸುನಕ್ಷತ್ರದ ಮಳೆಯು ನಿನ್ನೆಯಿಂದ ಅಬ್ಬರಿಸುತ್ತಿದೆ. ರಾಜ್ಯ ಮತ್ತು ಗೋವಾ ಕರಾವಳಿಯಲ್ಲಿ ಇನ್ನೂ ಮೂರು ದಿನ ಇದೇ ರೀತಿಯ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.