ಚಿಕ್ಕಮಗಳೂರು: ಕಾಫಿನಾಡಿನ ವಿವಿಧೆಡೆ ಉತ್ತಮ ಮಳೆಯಾಗಿದೆ. ಇಳೆಗೆ ತಂಪೆರೆದಿದೆ. ಕಡೂರು, ಚಿಕ್ಕಮಗಳೂರು, ಮೂಡಿಗೆರೆ, ಕೊಟ್ಟಿಗೆಹಾರ, ಕಳಸ ಭಾಗದಲ್ಲಿ ಮಳೆಯಾಗಿದೆ. ಸಿಡಿಲು, ಮಿಂಚು, ಗಾಳಿ ಆರ್ಭಟವೂ ಇತ್ತು. ಪೂರ್ವ ಮುಂಗಾರು ಮಳೆ ಬೆಳೆಗಾರರಲ್ಲಿ ಹರ್ಷ ಮೂಡಿಸಿದೆ.ಶಿವಮೊಗ್ಗ, ಭದ್ರಾವತಿ ಸುತ್ತಮುತ್ತ ಸಹ ಮಳೆಯಾಗಿದೆ.