<p><strong>ಬೆಂಗಳೂರು</strong>: ರಾಜ್ಯದಲ್ಲಿ ಮಂಗಳವಾರ ಚಿತ್ರದುರ್ಗ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯ ವಿವಿಧೆಡೆ ಮಳೆಯಾಗಿದೆ. ಅಲ್ಲಲ್ಲಿ ಮರ ಬಿದ್ದು, ವಿದ್ಯುತ್ ಕಂಬಗಳು ಉರುಳಿವೆ.</p>.<p>ಚಿತ್ರದುರ್ಗ ಜಿಲ್ಲೆಯಲ್ಲಿ ಹೊಸದುರ್ಗ ಪಟ್ಟಣ ಸೇರಿ ತಾಲ್ಲೂಕಿನ ವಿವಿಧೆಡೆ ಮಂಗಳವಾರ ಸಂಜೆ ಗುಡುಗು, ಬಿರುಗಾಳಿ ಸಹಿತ ಧಾರಾಕಾರ ಮಳೆ ಸುರಿಯಿತು.</p>.<p>ಹಿರಿಯೂರಿನಲ್ಲಿ ಆಲಿಕಲ್ಲು ಸಮೇತ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಾಳಿ, ಗುಡುಗು–ಸಿಡಿಲು ಸಹಿತ ಮಳೆ ಸುರಿದಿದೆ. ವಿವಿಧೆಡೆ ಮರಗಳು ಬಿದ್ದಿದ್ದು, ವಿದ್ಯುತ್ ಕಂಬ, ತಂತಿ, ಮನೆ ಹಾಗೂ ಕೃಷಿಗೆ ಹಾನಿಯಾಗಿದೆ.</p>.<p>ಪುತ್ತೂರು ಹಾಗೂ ಕಡಬ ತಾಲ್ಲೂಕಿನಲ್ಲಿ ಭಾರಿ ಗಾಳಿ ಸಹಿತ ಮಳೆ ಸುರಿದಿದೆ. ಗಾಳಿಗೆ ಕೆಲವು ಮನೆ, ಅಂಗಡಿ, ಮದರಸಾದ ಚಾವಣಿಗೆ ಹಾನಿಯಾಗಿದೆ. ಅಲ್ಲದೇ ವಿವಿಧೆಡೆ ಮರಗಳು ಉರುಳಿ ವಿದ್ಯುತ್ ತಂತಿ ಮೇಲೆ ಬಿದ್ದಿದ್ದು, ಕಂಬಗಳು ಮುರಿದಿವೆ.</p>.<p>ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ ಸುರಿಯಿತು.</p>.<p><strong>44.2 ಡಿಗ್ರಿ ತಾಪಮಾನ</strong><br /><strong>ಕಲಬುರ್ಗಿ:</strong> ನಗರದಲ್ಲಿ ಗರಿಷ್ಠ ತಾಪಮಾನ ಮಂಗಳವಾರ 44.2 ಡಿಗ್ರಿ ಸೆಲ್ಸಿಯಸ್ ಇತ್ತು. ಅತಿ ಹೆಚ್ಚು ಝಳ ಅನುಭವಿಸುತ್ತಿರುವ ದೇಶದ 10 ನಗರಗಳಲ್ಲಿ ಈಗ ಕಲಬುರ್ಗಿಯೂ ಗುರುತಿಸಿಕೊಂಡಿದೆ.</p>.<p>ಭಾರತ ಹವಾಮಾನ ಇಲಾಖೆಯ ವೆಬ್ಸೈಟ್ನಲ್ಲಿಯ ಮಾಹಿತಿ ಪ್ರಕಾರ 2017ರಲ್ಲಿ ಇದೇ ದಿನ ಗರಿಷ್ಠ ತಾಪಮಾನ 41.4, 2018ರಲ್ಲಿ 42.1 ಹಾಗೂ 2019ರಲ್ಲಿ 41.2 ಡಿಗ್ರಿ ಸೆಲ್ಸಿಯಸ್ ಇತ್ತು.</p>.<p>ಐದು ವರ್ಷಗಳಲ್ಲಿ ಮೊದಲ ಬಾರಿಗೆ ಗರಿಷ್ಠ ತಾಪಮಾನ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯದಲ್ಲಿ ಮಂಗಳವಾರ ಚಿತ್ರದುರ್ಗ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯ ವಿವಿಧೆಡೆ ಮಳೆಯಾಗಿದೆ. ಅಲ್ಲಲ್ಲಿ ಮರ ಬಿದ್ದು, ವಿದ್ಯುತ್ ಕಂಬಗಳು ಉರುಳಿವೆ.</p>.<p>ಚಿತ್ರದುರ್ಗ ಜಿಲ್ಲೆಯಲ್ಲಿ ಹೊಸದುರ್ಗ ಪಟ್ಟಣ ಸೇರಿ ತಾಲ್ಲೂಕಿನ ವಿವಿಧೆಡೆ ಮಂಗಳವಾರ ಸಂಜೆ ಗುಡುಗು, ಬಿರುಗಾಳಿ ಸಹಿತ ಧಾರಾಕಾರ ಮಳೆ ಸುರಿಯಿತು.</p>.<p>ಹಿರಿಯೂರಿನಲ್ಲಿ ಆಲಿಕಲ್ಲು ಸಮೇತ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಾಳಿ, ಗುಡುಗು–ಸಿಡಿಲು ಸಹಿತ ಮಳೆ ಸುರಿದಿದೆ. ವಿವಿಧೆಡೆ ಮರಗಳು ಬಿದ್ದಿದ್ದು, ವಿದ್ಯುತ್ ಕಂಬ, ತಂತಿ, ಮನೆ ಹಾಗೂ ಕೃಷಿಗೆ ಹಾನಿಯಾಗಿದೆ.</p>.<p>ಪುತ್ತೂರು ಹಾಗೂ ಕಡಬ ತಾಲ್ಲೂಕಿನಲ್ಲಿ ಭಾರಿ ಗಾಳಿ ಸಹಿತ ಮಳೆ ಸುರಿದಿದೆ. ಗಾಳಿಗೆ ಕೆಲವು ಮನೆ, ಅಂಗಡಿ, ಮದರಸಾದ ಚಾವಣಿಗೆ ಹಾನಿಯಾಗಿದೆ. ಅಲ್ಲದೇ ವಿವಿಧೆಡೆ ಮರಗಳು ಉರುಳಿ ವಿದ್ಯುತ್ ತಂತಿ ಮೇಲೆ ಬಿದ್ದಿದ್ದು, ಕಂಬಗಳು ಮುರಿದಿವೆ.</p>.<p>ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ ಸುರಿಯಿತು.</p>.<p><strong>44.2 ಡಿಗ್ರಿ ತಾಪಮಾನ</strong><br /><strong>ಕಲಬುರ್ಗಿ:</strong> ನಗರದಲ್ಲಿ ಗರಿಷ್ಠ ತಾಪಮಾನ ಮಂಗಳವಾರ 44.2 ಡಿಗ್ರಿ ಸೆಲ್ಸಿಯಸ್ ಇತ್ತು. ಅತಿ ಹೆಚ್ಚು ಝಳ ಅನುಭವಿಸುತ್ತಿರುವ ದೇಶದ 10 ನಗರಗಳಲ್ಲಿ ಈಗ ಕಲಬುರ್ಗಿಯೂ ಗುರುತಿಸಿಕೊಂಡಿದೆ.</p>.<p>ಭಾರತ ಹವಾಮಾನ ಇಲಾಖೆಯ ವೆಬ್ಸೈಟ್ನಲ್ಲಿಯ ಮಾಹಿತಿ ಪ್ರಕಾರ 2017ರಲ್ಲಿ ಇದೇ ದಿನ ಗರಿಷ್ಠ ತಾಪಮಾನ 41.4, 2018ರಲ್ಲಿ 42.1 ಹಾಗೂ 2019ರಲ್ಲಿ 41.2 ಡಿಗ್ರಿ ಸೆಲ್ಸಿಯಸ್ ಇತ್ತು.</p>.<p>ಐದು ವರ್ಷಗಳಲ್ಲಿ ಮೊದಲ ಬಾರಿಗೆ ಗರಿಷ್ಠ ತಾಪಮಾನ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>