<p><strong>ಬೆಂಗಳೂರು: </strong>ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸೋಮವಾರ ಉತ್ತಮ ಮಳೆಯಾಗಿದೆ. ಕೆಲವು ಪ್ರದೇಶದಲ್ಲಿ ಕಟಾವಿಗೆ ಬಂದ ಬೆಳೆಗೆ ಹಾನಿಯಾಗಿದೆ.</p>.<p>ಬಳ್ಳಾರಿಯ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಕರಡಿಹಳ್ಳಿಯಲ್ಲಿಭಾನುವಾರ ತಡರಾತ್ರಿ ಸುರಿದ ಆಲಿಕಲ್ಲು ಮಳೆಗೆ 12 ಕುರಿಗಳು ಸತ್ತಿದ್ದು,<br />10ಕ್ಕೂ ಹೆಚ್ಚು ಕಡೆ ವೀಳ್ಯದೆಲೆ ಹಾಗೂಬಾಳೆ ತೋಟಗಳು ಹಾಳಾಗಿವೆ.ಹೂವಿನಹಡಗಲಿ ತಾಲ್ಲೂಕಿನಲ್ಲಿ ಕಟಾವಿಗೆ ಬಂದಿದ್ದ ನೂರಾರು ಎಕರೆ ಭತ್ತ ಹಾಗೂ ಬಾಳೆ ಬೆಳೆ ನೆಲಕಚ್ಚಿವೆ. ಸಂಡೂರು ತಾಲ್ಲೂಕಿನಲ್ಲಿ ಆರು ಮನೆಗಳು ಜಖಂಗೊಂಡಿವೆ.</p>.<p>ಉತ್ತರಕನ್ನಡ ಜಿಲ್ಲೆಯ ಮುಂಡಗೋಡ ಸುತ್ತಮುತ್ತ ಸೋಮವಾರ ಗುಡುಗು ಸಹಿತ ಮಳೆಯಾಗಿದ್ದು, ಕಟಾವಿಗೆ ಬಂದಿದ್ದ ಗೋವಿನಜೋಳಕ್ಕೆ ಹಾನಿಯಾಗಿದೆ. ಶಿರಸಿ ತಾಲ್ಲೂಕಿನ ಬದನಗೋಡ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದಾಸನಕೊಪ್ಪ, ಸುತ್ತಲಿನ ಹಳ್ಳಿಗಳಲ್ಲಿ ಬಿರುಸಿನ ಮಳೆ ಸುರಿದಿದೆ.</p>.<p>ಬೆಳಗಾವಿ ಜಿಲ್ಲೆಯ ಕೆಲವೆಡೆ ಸೋಮವಾರ ತುಂತುರು ಮಳೆಯಾಗಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿ, ರಾಣೆಬೆನ್ನೂರು, ಅಕ್ಕಿ ಆಲೂರು, ಹಾನಗಲ್ನಲ್ಲಿ ಮಳೆಯಾಗಿದೆ. ಗದಗದ ಮುಳಗುಂದದಲ್ಲೂ ಮಳೆಯಾಗಿದೆ.</p>.<p class="Subhead">ಬಿರುಸಿನ ಮಳೆ: ಕೊಡಗು ಜಿಲ್ಲೆಯ ವಿರಾಜಪೇಟೆ, ಮಾಯಮುಡಿ, ಗೋಣಿಕೊಪ್ಪಲು, ರುದ್ರಬೀಡು, ತಿತಿಮತಿ, ಸಿದ್ದಾಪುರ, ಮಗ್ಗುಲ, ನೆಲ್ಯಹುದಿಕೇರಿ ಭಾಗದಲ್ಲಿ ಉತ್ತಮ ಮಳೆಯಾಗಿದೆ. ನಾಪೋಕ್ಲು ಭಾಗದಲ್ಲಿ ಸಂಜೆ ಅರ್ಧ ಗಂಟೆಗೂ ಹೆಚ್ಚು ಸಮಯ ಬಿರುಸಿನ ಮಳೆ ಸುರಿದು ತಂಪೆರೆಯಿತು.</p>.<p>ಮೈಸೂರು ಸೇರಿದಂತೆ ಜಿಲ್ಲೆಯ ಹಲವೆಡೆ ಭಾನುವಾರ ತಡರಾತ್ರಿ ಗುಡುಗು ಸಹಿತ ಬಿರುಸಿನ ಮಳೆಯಾಗಿದೆ.</p>.<p class="Subhead"><strong>ಸಾಧಾರಣ ಮಳೆ:</strong>ಚಿಕ್ಕಮಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಸಾಧಾರಣ ಮಳೆಯಾಗಿ,ಇಳೆಗೆ ತಂಪೆರೆ<br />ಯಿತು. ಬೀದರ್ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಭಾನುವಾರ ತಡರಾತ್ರಿ ಮಳೆ ಸುರಿದಿದೆ.</p>.<p>ತುಮಕೂರು ಹಾಗೂ ಕೋಲಾರದಲ್ಲಿ ಹದವಾದ ಮಳೆ ಸುರಿದಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸೋಮವಾರ ಉತ್ತಮ ಮಳೆಯಾಗಿದೆ. ಕೆಲವು ಪ್ರದೇಶದಲ್ಲಿ ಕಟಾವಿಗೆ ಬಂದ ಬೆಳೆಗೆ ಹಾನಿಯಾಗಿದೆ.</p>.<p>ಬಳ್ಳಾರಿಯ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಕರಡಿಹಳ್ಳಿಯಲ್ಲಿಭಾನುವಾರ ತಡರಾತ್ರಿ ಸುರಿದ ಆಲಿಕಲ್ಲು ಮಳೆಗೆ 12 ಕುರಿಗಳು ಸತ್ತಿದ್ದು,<br />10ಕ್ಕೂ ಹೆಚ್ಚು ಕಡೆ ವೀಳ್ಯದೆಲೆ ಹಾಗೂಬಾಳೆ ತೋಟಗಳು ಹಾಳಾಗಿವೆ.ಹೂವಿನಹಡಗಲಿ ತಾಲ್ಲೂಕಿನಲ್ಲಿ ಕಟಾವಿಗೆ ಬಂದಿದ್ದ ನೂರಾರು ಎಕರೆ ಭತ್ತ ಹಾಗೂ ಬಾಳೆ ಬೆಳೆ ನೆಲಕಚ್ಚಿವೆ. ಸಂಡೂರು ತಾಲ್ಲೂಕಿನಲ್ಲಿ ಆರು ಮನೆಗಳು ಜಖಂಗೊಂಡಿವೆ.</p>.<p>ಉತ್ತರಕನ್ನಡ ಜಿಲ್ಲೆಯ ಮುಂಡಗೋಡ ಸುತ್ತಮುತ್ತ ಸೋಮವಾರ ಗುಡುಗು ಸಹಿತ ಮಳೆಯಾಗಿದ್ದು, ಕಟಾವಿಗೆ ಬಂದಿದ್ದ ಗೋವಿನಜೋಳಕ್ಕೆ ಹಾನಿಯಾಗಿದೆ. ಶಿರಸಿ ತಾಲ್ಲೂಕಿನ ಬದನಗೋಡ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದಾಸನಕೊಪ್ಪ, ಸುತ್ತಲಿನ ಹಳ್ಳಿಗಳಲ್ಲಿ ಬಿರುಸಿನ ಮಳೆ ಸುರಿದಿದೆ.</p>.<p>ಬೆಳಗಾವಿ ಜಿಲ್ಲೆಯ ಕೆಲವೆಡೆ ಸೋಮವಾರ ತುಂತುರು ಮಳೆಯಾಗಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿ, ರಾಣೆಬೆನ್ನೂರು, ಅಕ್ಕಿ ಆಲೂರು, ಹಾನಗಲ್ನಲ್ಲಿ ಮಳೆಯಾಗಿದೆ. ಗದಗದ ಮುಳಗುಂದದಲ್ಲೂ ಮಳೆಯಾಗಿದೆ.</p>.<p class="Subhead">ಬಿರುಸಿನ ಮಳೆ: ಕೊಡಗು ಜಿಲ್ಲೆಯ ವಿರಾಜಪೇಟೆ, ಮಾಯಮುಡಿ, ಗೋಣಿಕೊಪ್ಪಲು, ರುದ್ರಬೀಡು, ತಿತಿಮತಿ, ಸಿದ್ದಾಪುರ, ಮಗ್ಗುಲ, ನೆಲ್ಯಹುದಿಕೇರಿ ಭಾಗದಲ್ಲಿ ಉತ್ತಮ ಮಳೆಯಾಗಿದೆ. ನಾಪೋಕ್ಲು ಭಾಗದಲ್ಲಿ ಸಂಜೆ ಅರ್ಧ ಗಂಟೆಗೂ ಹೆಚ್ಚು ಸಮಯ ಬಿರುಸಿನ ಮಳೆ ಸುರಿದು ತಂಪೆರೆಯಿತು.</p>.<p>ಮೈಸೂರು ಸೇರಿದಂತೆ ಜಿಲ್ಲೆಯ ಹಲವೆಡೆ ಭಾನುವಾರ ತಡರಾತ್ರಿ ಗುಡುಗು ಸಹಿತ ಬಿರುಸಿನ ಮಳೆಯಾಗಿದೆ.</p>.<p class="Subhead"><strong>ಸಾಧಾರಣ ಮಳೆ:</strong>ಚಿಕ್ಕಮಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಸಾಧಾರಣ ಮಳೆಯಾಗಿ,ಇಳೆಗೆ ತಂಪೆರೆ<br />ಯಿತು. ಬೀದರ್ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಭಾನುವಾರ ತಡರಾತ್ರಿ ಮಳೆ ಸುರಿದಿದೆ.</p>.<p>ತುಮಕೂರು ಹಾಗೂ ಕೋಲಾರದಲ್ಲಿ ಹದವಾದ ಮಳೆ ಸುರಿದಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>