ಮಡಿಕೇರಿ: ಮಡಿಕೇರಿ – ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರ ತಾಳತ್ತಮನೆ ತಿರುವಿನಲ್ಲಿ ಹೆದ್ದಾರಿ ಕುಸಿಯುತ್ತಿರುವುದು ಆತಂಕ ಮೂಡಿಸಿದೆ. ಕಳೆದ ವರ್ಷ ಕುಸಿದಿದ್ದ ಸ್ಥಳದಲ್ಲೇ ಹೆದ್ದಾರಿ ಕುಸಿಯುತ್ತಿದೆ.
ಎಂ–ಸ್ಯಾಂಡ್ ಅಳವಡಿಸಿ ತಾತ್ಕಾಲಿಕವಾಗಿ ರಸ್ತೆ ದುರಸ್ತಿ ಮಾಡಲಾಗಿತ್ತು. ಮಳೆಯ ರಭಸಕ್ಕೆ ತಳಭಾಗದ ಮರಳಿನ ಚೀಲಗಳು ಕೊಚ್ಚಿಹೋಗಿವೆ. ಸದ್ಯಕ್ಕೆ ಒಂದು ಬದಿಯಲ್ಲಿ ವಾಹನಗಳು ಸಂಪಾಜೆ, ಸುಳ್ಯದ ಮೂಲಕ ದಕ್ಷಿಣ ಕನ್ನಡಕ್ಕೆ ಸಂಚರಿಸುತ್ತಿವೆ.
ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪಿ. ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಲಕ್ಷೀಪ್ರಿಯಾ ಅವರು ಪ್ರವಾಹಕ್ಕೆ ತುತ್ತಾಗಿರುವ ಐಕೊಳ, ನೆಲ್ಯಹುದಿಕೇರಿ ಹಾಗೂ ಕರಡಿಗೋಡು ಗ್ರಾಮಗಳಿಗೆ ಭೇಟಿ ಪರಿಸ್ಥಿತಿ ಅವಲೋಕಿಸಿದರು.