ಲಕ್ಷ್ಮಣತೀರ್ಥ ನದಿ ಪ್ರವಾಹದಿಂದ ಕಾನೂರು, ಹರಿಹರದಲ್ಲಿ ಗದ್ದೆಗಳು ಜಲಾವೃತಗೊಂಡಿವೆ. ಅಮ್ಮತ್ತಿ, ಗೋಣಿಕೊಪ್ಪಲು ನಡುವಿನ ಕೀರೆಹೊಳೆಯಲ್ಲಿ ನೀರಿನಮಟ್ಟ ಹೆಚ್ಚಾಗಿದೆ. ಮಡಿಕೇರಿ, ನಾಪೋಕ್ಲು, ಸುಂಟಿಕೊಪ್ಪ, ಪೊನ್ನಂಪೇಟೆ, ಸಿದ್ದಾಪುರ, ವಿರಾಜಪೇಟೆ, ಸೋಮವಾರಪೇಟೆಯಲ್ಲಿ ಸತತ ಮಳೆಯಾಗುತ್ತಿದೆ.
ಮತ್ತೆ ಆಘಾತ: ಕೊಡಗಿನಲ್ಲಿಆಗಸ್ಟ್ ತಿಂಗಳಲ್ಲಿ ಸುರಿದ ಮಳೆಯಿಂದ ಪ್ರವಾಹ ಸೃಷ್ಟಿಯಾಗಿ ಅಪಾರ ಹಾನಿಯಾಗಿತ್ತು. ನದಿಗಳು ಉಕ್ಕೇರಿದ್ದರ ಪರಿಣಾಮ ಹಲವು ಮನೆಗಳೂ ಕುಸಿದಿದ್ದವು. ಕಾಫಿ ಬೆಳೆಗಾರರು ಸಂಕಷ್ಟಕ್ಕೆ ಒಳಗಾಗಿದ್ದರು. ಈಗ ಮತ್ತೆ ಪ್ರವಾಹ ಭೀತಿ ಎದುರಾಗಿದೆ.