ತನಿಖೆ ಶೇ 70ರಷ್ಟು ಪೂರ್ಣಗೊಂಡ ಸಂದರ್ಭದಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದ ಈಶ್ವರಪ್ಪ, ‘ನಾನೊಬ್ಬ ಸಾರ್ವಜನಿಕ ಸೇವಕ. ನನ್ನ ವಿರುದ್ಧ ದೂರು ದಾಖಲಿಸುವ ಮುನ್ನ ಪೂರ್ವಾನುಮತಿ ಪಡೆಯದೇ ಪ್ರಕರಣ ದಾಖಲಿಸಲಾಗಿದೆ. ಆದ್ದರಿಂದ ದೂರು ವಜಾಗೊಳಿಸಬೇಕು’ ಎಂದು ಮನವಿ ಮಾಡಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್, ವಿನೋದ್ ದೂರನ್ನು ವಜಾಗೊಳಿಸಿತ್ತು.