ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರಾಕಾರ ಮಳೆ; ಮುಂಡಗೋಡ-ಯಲ್ಲಾಪುರ ರಸ್ತೆ ಸಂಪರ್ಕ ಕಡಿತ

Last Updated 9 ಜುಲೈ 2020, 7:32 IST
ಅಕ್ಷರ ಗಾತ್ರ

ಮುಂಡಗೋಡ: ಬೆಳಿಗ್ಗೆಯಿಂದ ಒಂದೇ ಸಮನೆ ಮಳೆ ಸುರಿಯುತ್ತಿದ್ದು, ಹಲವೆಡೆ ಗದ್ದೆಗಳಲ್ಲಿ ನೀರು ಸಂಗ್ರಹಗೊಂಡಿದೆ. ಮುಂಡಗೋಡ-ಯಲ್ಲಾಪುರ ತಾಲ್ಲೂಕಿನ ಸಂಪರ್ಕ ಕೊಂಡಿಯಾಗಿರುವ, ಶಿಡ್ಲಗುಂಡಿಯ ತಾತ್ಕಾಲಿಕ ಸೇತುವೆ ನೀರಿನಲ್ಲಿ ಮುಳುಗಿ ರಸ್ತೆ ಸಂಪರ್ಕ ಕಡಿತಗೊಂಡಿದೆ.

ತಾಲ್ಲೂಕಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಗಟಾರಗಳು ಭರ್ತಿಯಾಗಿ, ರಸ್ತೆಗಳಲ್ಲಿ ನೀರು ತುಂಬಿಕೊಂಡಿದೆ.

‘ಬೆಳಿಗ್ಗೆ 10.30ರ ನಂತರ ಹೆಚ್ಚಿನ ಪ್ರಮಾಣದ ನೀರು ಹರಿಯುತ್ತಿರುವುದರಿಂದ ಶಿಡ್ಲಗುಂಡಿಯ ತಾತ್ಕಾಲಿಕ ಸೇತುವೆ ಮುಳುಗಡೆಯಾಗಿದೆ. ಅದಕ್ಕಿಂತ ಮುಂಚೆ ವಾಹನಗಳು ಓಡಾಟ ನಡೆಸಿದ್ದವು. ಈಗ ರಸ್ತೆ ಸಂಪರ್ಕ ಕಡಿತಗೊಂಡಿದೆ’ಎಂದು ಸ್ಥಳೀಯ ನಿವಾಸಿ ಪ್ರಕಾಶ ಮಹಾಲೆ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT