<p><strong>ನವದೆಹಲಿ: </strong>ಮಳೆಯ ಕೊರತೆ ಮತ್ತು ಬೆಳೆ ಹಾನಿಯಿಂದಾಗಿ ತೀವ್ರ ಸಂಕಷ್ಟದಲ್ಲಿರುವ ರಾಜ್ಯದ 16 ಜಿಲ್ಲೆಗಳ ಅಡಿಕೆ ಬೆಳೆಗಾರರ ಸಮಸ್ಯೆ ನಿವಾರಿಸಲು ಮುಂದಾಗಬೇಕು ಎಂದು ದಕ್ಷಿಣ ಕನ್ನಡದ ಬಿಜೆಪಿ ಸಂಸದ ನಳಿನ್ಕುಮಾರ್ ಕಟೀಲ್ ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.</p>.<p>ಲೋಕಸಭೆಯಲ್ಲಿ ಬುಧವಾರ ಶೂನ್ಯವೇಳೆಯಲ್ಲಿ ಕನ್ನಡದಲ್ಲೇ ಈ ವಿಷಯ ಪ್ರಸ್ತಾಪಿಸಿದ ಅವರು, ಕೊಳೆ ರೋಗ, ಹಳದಿ ರೋಗದಿಂದಾಗಿ ಅಡಿಕೆ ಮರಗಳು ಒಣಗಿವೆ. ಈ ರೋಗ ನಿಯಂತ್ರಿಸುವ ನಿಟ್ಟಿನಲ್ಲಿ ವೈಜ್ಞಾನಿಕ ಮಾದರಿಯ ಕೀಟನಾಶಕ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಕೋರಿದರು.</p>.<p>ದೇಶದಾದ್ಯಂತ ಮಂಗಳಕಾರ್ಯ ಹಾಗೂ ಬಣ್ಣ ತಯಾರಿಕೆಗೂ ಬಳಕೆಯಾಗುವ ಅಡಿಕೆಗೆ ಸಾಕಷ್ಟು ಬೇಡಿಕೆ ಇದೆ. ಆದರೂ ಸೂಕ್ತ ರೀತಿಯ ದರ ದೊರೆಯುತ್ತಿಲ್ಲ. ನೆರೆಯ ಬಾಂಗ್ಲಾದೇಶ ಮತ್ತಿತರ ರಾಷ್ಟ್ರಗಳಿಂದ ಅಡಿಕೆ ಆಮದು ಮಾಡಿಕೊಳ್ಳುತ್ತಿರುವುದೇ ದರ ಕಡಿಮೆಯಾಗಲು ಕಾರಣವಾಗಿದೆ ಎಂದು ಅವರು ದೂರಿದರು.</p>.<p>ತೆರಿಗೆ ಇಲ್ಲದೆ ಅಕ್ರಮವಾಗಿ ಬರುತ್ತಿರುವ ವಿದೇಶಿ ಅಡಿಕೆಯ ಆಮದನ್ನು ನಿಯಂತ್ರಿಸುವ ಮೂಲಕ ಕೇಂದ್ರ ಸರ್ಕಾರವು ಸ್ಥಳೀಯ ಬೆಳೆಗಾರರಿಗೆ ಅನುಕೂಲ ಕಲ್ಪಿಸಬೇಕು. ಅನಾವೃಷ್ಟಿಯಿಂದ ಎದುರಾಗಿರುವ ನಷ್ಟಕ್ಕೆ ಪರಿಹಾರವನ್ನೂ ಬಿಡುಗಡೆ ಮಾಡಬೇಕು ಎಂದು ಅವರು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಮಳೆಯ ಕೊರತೆ ಮತ್ತು ಬೆಳೆ ಹಾನಿಯಿಂದಾಗಿ ತೀವ್ರ ಸಂಕಷ್ಟದಲ್ಲಿರುವ ರಾಜ್ಯದ 16 ಜಿಲ್ಲೆಗಳ ಅಡಿಕೆ ಬೆಳೆಗಾರರ ಸಮಸ್ಯೆ ನಿವಾರಿಸಲು ಮುಂದಾಗಬೇಕು ಎಂದು ದಕ್ಷಿಣ ಕನ್ನಡದ ಬಿಜೆಪಿ ಸಂಸದ ನಳಿನ್ಕುಮಾರ್ ಕಟೀಲ್ ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.</p>.<p>ಲೋಕಸಭೆಯಲ್ಲಿ ಬುಧವಾರ ಶೂನ್ಯವೇಳೆಯಲ್ಲಿ ಕನ್ನಡದಲ್ಲೇ ಈ ವಿಷಯ ಪ್ರಸ್ತಾಪಿಸಿದ ಅವರು, ಕೊಳೆ ರೋಗ, ಹಳದಿ ರೋಗದಿಂದಾಗಿ ಅಡಿಕೆ ಮರಗಳು ಒಣಗಿವೆ. ಈ ರೋಗ ನಿಯಂತ್ರಿಸುವ ನಿಟ್ಟಿನಲ್ಲಿ ವೈಜ್ಞಾನಿಕ ಮಾದರಿಯ ಕೀಟನಾಶಕ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಕೋರಿದರು.</p>.<p>ದೇಶದಾದ್ಯಂತ ಮಂಗಳಕಾರ್ಯ ಹಾಗೂ ಬಣ್ಣ ತಯಾರಿಕೆಗೂ ಬಳಕೆಯಾಗುವ ಅಡಿಕೆಗೆ ಸಾಕಷ್ಟು ಬೇಡಿಕೆ ಇದೆ. ಆದರೂ ಸೂಕ್ತ ರೀತಿಯ ದರ ದೊರೆಯುತ್ತಿಲ್ಲ. ನೆರೆಯ ಬಾಂಗ್ಲಾದೇಶ ಮತ್ತಿತರ ರಾಷ್ಟ್ರಗಳಿಂದ ಅಡಿಕೆ ಆಮದು ಮಾಡಿಕೊಳ್ಳುತ್ತಿರುವುದೇ ದರ ಕಡಿಮೆಯಾಗಲು ಕಾರಣವಾಗಿದೆ ಎಂದು ಅವರು ದೂರಿದರು.</p>.<p>ತೆರಿಗೆ ಇಲ್ಲದೆ ಅಕ್ರಮವಾಗಿ ಬರುತ್ತಿರುವ ವಿದೇಶಿ ಅಡಿಕೆಯ ಆಮದನ್ನು ನಿಯಂತ್ರಿಸುವ ಮೂಲಕ ಕೇಂದ್ರ ಸರ್ಕಾರವು ಸ್ಥಳೀಯ ಬೆಳೆಗಾರರಿಗೆ ಅನುಕೂಲ ಕಲ್ಪಿಸಬೇಕು. ಅನಾವೃಷ್ಟಿಯಿಂದ ಎದುರಾಗಿರುವ ನಷ್ಟಕ್ಕೆ ಪರಿಹಾರವನ್ನೂ ಬಿಡುಗಡೆ ಮಾಡಬೇಕು ಎಂದು ಅವರು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>