ವೈದ್ಯಕೀಯ ಪ್ರಯೋಗಕ್ಕೆ ಒಳಗಾಗಿದ್ದ 23ರಿಂದ 65 ವರ್ಷದೊಳಗಿನ ರೋಗಿಗಳಲ್ಲಿ ಸೋಂಕಿನ ಲಕ್ಷಣಗಳು ಬಹಿರಂಗವಾಗಿ ಗೋಚರಿಸುತ್ತಿದ್ದವು. ಇದರಿಂದಾಗಿ ಅವರು ಅಸ್ವಸ್ಥರಾಗಿದ್ದರು. ಅವರಿಗೆ ಅಲೋಪತಿ ಚಿಕಿತ್ಸೆಯ ಜತೆ ಜತೆಗೆಯೇ ಗಿಡಮೂಲಿಕೆಗಳಿಂದ ಕಜೆ ಅವರು ಸಂಶೋಧಿಸಿದ್ದ ‘ಭೌಮ್ಯ’ ಮತ್ತು ‘ಸಾತ್ಮ್ಯ’ ಮಾತ್ರೆಗಳನ್ನು ಪ್ರತಿನಿತ್ಯ ನೀಡಲಾಗುತ್ತಿತ್ತು. ‘ಇದರಿಂದಾಗಿ ಕೇವಲ ಒಂಬತ್ತು ದಿನಗಳಲ್ಲಿಯೇ ರೋಗಿಗಳು ಸಂಪೂರ್ಣ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇವರಲ್ಲಿ ಕೆಲವರು ಮಧುಮೇಹ, ಅಧಿಕ ರಕ್ತದೊತ್ತಡ, ಕ್ಷಯ ಸೇರಿದಂತೆ ವಿವಿಧ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರು ಕೂಡ ವೇಗವಾಗಿ ಗುಣಮುಖರಾಗಿದ್ದಾರೆ’ ಎಂದು ಕಜೆ ‘ಪ್ರಜಾವಾಣಿ’ಗೆ ತಿಳಿಸಿದರು.