ಇದಕ್ಕೆ ಪ್ರಾಸಿಕ್ಯೂಷನ್ ಪರ ಹಾಜರಿದ್ದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನಾರಾಯಣ ರೆಡ್ಡಿ, ‘ಐಎಂಎ ಕಂಪನಿ ವಿರುದ್ಧ ಬಂದಿರುವ ದೂರುಗಳ ಬಗ್ಗೆ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಸರ್ಕಾರ ಆರೋಪಿಗೆ ನಿರ್ದೇಶಿಸಿತ್ತು. ನಾಗರಾಜ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರನ್ನು ಕರೆಯಿಸಿಕೊಂಡು, ನಿಮ್ಮ ಪರವಾಗಿ ವರದಿ ನಿಡುತ್ತೇನೆ ಎಂದು ಅದರಲ್ಲಿದ್ದಂತಹ ಆಡಳಿತ ದೌರ್ಬಲ್ಯ, ವಹಿವಾಟಿನ ಹುಳುಕು ಮತ್ತು ಕಾನೂನು ಬಾಹಿರ ವ್ಯವಹಾರಗಳನ್ನು ಮುಚ್ಚಿಟ್ಟು, ಎಲ್ಲಾ ಸರಿ ಇದೆ. ಇದರಲ್ಲಿ ಏನೂ ತೊಂದರೆ ಇಲ್ಲ ಎಂಬ ಪಕ್ಷಪಾತಿ ವರದಿ ನೀಡಿದ್ದಾರೆ’ ಎಂದು ಬಲವಾಗಿ ಆಕ್ಷೇಪಿಸಿದರು.