ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋರ್ಟ್ ಕಲಾಪ ಮಾರ್ಗಸೂಚಿ ಮಾರ್ಪಾಡು

Last Updated 14 ಜೂನ್ 2020, 10:01 IST
ಅಕ್ಷರ ಗಾತ್ರ

ಬೆಂಗಳೂರು:ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿಹೈಕೋರ್ಟ್ ಹಾಗೂ ಜಿಲ್ಲಾ ನ್ಯಾಯಾಲಯಗಳಲ್ಲಿ ತುರ್ತು ಪ್ರಕರಣಗಳ ವಿಚಾರಣೆಗೆ ನಿಗದಿಪಡಿಸಿರುವ ಮಾರ್ಗಸೂಚಿಯನ್ನು ಇದೇ 15 ರಿಂದ ಜಾರಿಗೆ ಬರುವಂತೆ ಮಾರ್ಪಾಡು ಮಾಡಲಾಗಿದೆ.

ಏಪ್ರಿಲ್ 15ರಿಂದ ಎರಡು ವಾರಗಳ ಅವಧಿಗೆ ಮಾತ್ರ ಒಂದು ಕೋರ್ಟ್‌ನಲ್ಲಿ ದಿನಕ್ಕೆ ಬೆಳಗಿನ ಅವಧಿಯಲ್ಲಿ 10 ಮತ್ತು ಮಧ್ಯಾಹ್ನದ ಅವಧಿಯಲ್ಲಿ 10 ಪ್ರಕರಣಗಳನ್ನು ಮಾತ್ರ ವಿಚಾರಣೆ ನಡೆಸಲಾಗುವುದು.

ವಕೀಲರು ವಾದ ಮಂಡನೆಗೆ ಇಚ್ಛಿಸಿದರೆ ವಿಡಿಯೊ ಕಾನ್ಫರೆನ್ಸ್ ಸೌಲಭ್ಯ ಕಲ್ಪಿಸಲಾಗುವುದು. ಕೋರ್ಟ್ ಆವರಣಕ್ಕೆ ವಾದ ಮಂಡಿಸಲಿರುವ ವಕೀಲರನ್ನು ಹೊರತುಪಡಿಸಿ, ಇತರರಿಗೆ ಪ್ರವೇಶವಿಲ್ಲ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಮುಂದಿನ ಎರಡು ವಾರಗಳ ಪರಿಸ್ಥಿತಿ ಅವಲೋಕಿಸಿ ಮಾರ್ಗಸೂಚಿ ಮಾರ್ಪಾಡು ಮಾಡುವ ಬಗ್ಗೆ ನಿರ್ಧರಿಸಲಾಗುವುದು ಎಂದು ಹೈಕೋರ್ಟ್‌ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT