ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಪವನಚಂದ್ರ ಶೆಟ್ಟಿ ‘ಸರ್ಕಾರ 2015 ರಿಂದ ಟಿಪ್ಪು ಜಯಂತಿ ಆಚರಿಸುತ್ತಿದೆ. ಇದಕ್ಕಾಗಿ ಪ್ರತಿ ವರ್ಷ ಬೊಕ್ಕಸದಿಂದ ₹ 60 ಲಕ್ಷ ಖರ್ಚು ಮಾಡುತ್ತಿದೆ. ಈ ಹಿಂದೆ ಆಚರಣೆ ವೇಳೆ ಕೊಡಗಿನಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಆದ್ದರಿಂದ, ಆಚರಣೆಗೆ ತಡೆ ನೀಡಬೇಕು’ ಎಂದು ಕೋರಿದರು.