<p><strong>ಬೆಂಗಳೂರು</strong>: ‘ರಾಜ್ಯದ ಎಲ್ಲ ಕೆರೆಗಳ ಸರ್ವೆ ನಡೆಸಲು ಒಂದು ತಿಂಗಳಲ್ಲಿ ಜಿಲ್ಲಾ ಮಟ್ಟದ ಕೆರೆ ಸಂರಕ್ಷಣಾ ಸಮಿತಿ ರಚಿಸಬೇಕು’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.</p>.<p>ಕೆರೆ ಸಂರಕ್ಷಣೆ ಕುರಿತು ‘ಸಿಟಿಜನ್ ಆ್ಯಕ್ಷನ್ ಫೋರಂ’ ಸೇರಿದಂತೆ ಮೂವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.</p>.<p>‘ರಾಜ್ಯ ಮಟ್ಟದಲ್ಲಿ ಉನ್ನತ ಸಮಿತಿ ಹಾಗೂ ಜಿಲ್ಲಾ ಮಟ್ಟದಲ್ಲಿ ಕೆರೆ ಸಂರಕ್ಷಣಾ ಸಮಿತಿ ರಚಿಸಬೇಕು. ಈ ಸಮಿತಿಗಳು ಕೆರೆಗಳ ಸರ್ವೆ ನಡೆಸಿ, ಗಡಿ ಗುರುತಿಸಬೇಕು, ಬೇಲಿ ಅಳವಡಿಸಬೇಕು. ಸಮಿತಿ ರಚನೆ ಮಾಡಿದ ಬಗ್ಗೆ ಸಾರ್ವಜನಿಕರಿಗೆ ವ್ಯಾಪಕ ಪ್ರಚಾರ ನೀಡಬೇಕು. ಈ ಕುರಿತು ಕೋರ್ಟ್ಗೆ ಅನುಪಾಲನಾ ವರದಿ ಸಲ್ಲಿಸಬೇಕು’ ಎಂದು ನ್ಯಾಯಪೀಠ ನಿರ್ದೇಶಿಸಿದೆ.</p>.<p>‘ಕೆರೆ ಪ್ರದೇಶದ 30 ಮೀಟರ್ ಒಳಗಿರುವ ಕಟ್ಟಡಗಳನ್ನು ತೆರವುಗೊಳಿಸಬೇಕು ಎಂದು 2012ರ ಏಪ್ರಿಲ್ 11ರಂದು ಹೈಕೋರ್ಟ್ ಸರ್ಕಾರಕ್ಕೆ ಆದೇಶಿಸಿತ್ತು. ಈ ದಿಸೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ. ಆದರೆ, ಈ ಸಮಿತಿ ಈತನಕ ಕೇವಲ ಐದು ಸಭೆ ನಡೆಸಿದೆ’ ಎಂದು ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ.</p>.<p><strong>ಆಕ್ಷೇಪ:</strong> ಕೆರೆಗಳ ನಿರ್ವಹಣೆ ಜವಾಬ್ದಾರಿಯನ್ನು ಖಾಸಗಿ ಮತ್ತು ಕಾರ್ಪೊರೇಟ್ ಸಂಸ್ಥೆಗಳಿಗೆ ವಹಿಸಿ ಆ ಕುರಿತಂತೆ ಒಪ್ಪಂದ ಮಾಡಿಕೊಂಡಿರುವ ರಾಜ್ಯ ಸರ್ಕಾರದ ಕ್ರಮಕ್ಕೂ ನ್ಯಾಯಪೀಠ ಇದೇ ವೇಳೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.</p>.<p>‘ಒಪ್ಪಂದದ ಕಾನೂನು ಸಿಂಧುತ್ವವನ್ನು ನ್ಯಾಯಾಲಯ ಪರಿಶೀಲಿಸಲಿದೆ. ಅಲ್ಲಿಯವರೆಗೆ ಈ ರೀತಿಯ ಬೇರಾವುದೇ ಒಪ್ಪಂದ ಮಾಡಿಕೊಳ್ಳಬಾರದು. ಆದರೆ, ಕೆರೆಗಳ ಅಭಿವೃದ್ಧಿ ಹಾಗೂ ಪುನರುಜ್ಜೀವನಕ್ಕೆ ಕಾರ್ಪೋರೇಟ್ ಸಂಸ್ಥೆಗಳು ಸರ್ಕಾರಕ್ಕೆ ಹಣ ನೀಡುವುದಕ್ಕೆ ಈ ಆದೇಶ ಅಡ್ಡಿ ಬರುವುದಿಲ್ಲ’ ಎಂದೂ ನ್ಯಾಯಪೀಠ ಸ್ಪಷ್ಟಪಡಿಸಿದೆ.</p>.<p><strong>ಸರ್ವೆ ಕಾರ್ಯ ಬಾಕಿ:</strong> ‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ 205 ಕೆರೆಗಳಿವೆ. ಅವುಗಳಲ್ಲಿ 160 ಕೆರೆಗಳ ಸರ್ವೆ ನಡೆಸಲಾಗಿದೆ. ಉಳಿದ 45 ಕೆರೆಗಳ ಸರ್ವೆ ಕಾರ್ಯ ಬಾಕಿ ಇದೆ’ ಎಂದು ಬಿಬಿಎಂಪಿ ನ್ಯಾಯಪೀಠಕ್ಕೆ ಮಾಹಿತಿ ನೀಡಿದೆ.</p>.<p>ಇದನ್ನು ಪರಿಗಣಿಸಿದ ನ್ಯಾಯಪೀಠ, ‘ಎರಡು ತಿಂಗಳಲ್ಲಿ ಉಳಿದ 45 ಕೆರೆಗಳ ಸರ್ವೆ ಕಾರ್ಯ ಪೂರ್ಣಗೊಳಿಸಬೇಕು. ಒತ್ತುವರಿ ಮತ್ತು ಬಫರ್ ಝೋನ್ನಲ್ಲಿ ನಿರ್ಮಿಸಿರುವ ಕಟ್ಟಡಗಳನ್ನು ತೆರವುಗೊಳಿಸಲು ಸರ್ಕಾರ ಮತ್ತು ಬಿಬಿಎಂಪಿ ಜಂಟಿಯಾಗಿ ಕ್ರಮ ಜರುಗಿಸಬೇಕು’ ಎಂದು ನಿರ್ದೇಶಿಸಿ ವಿಚಾರಣೆಯನ್ನು ಏಪ್ರಿಲ್ 20ಕ್ಕೆ ಮುಂದೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ರಾಜ್ಯದ ಎಲ್ಲ ಕೆರೆಗಳ ಸರ್ವೆ ನಡೆಸಲು ಒಂದು ತಿಂಗಳಲ್ಲಿ ಜಿಲ್ಲಾ ಮಟ್ಟದ ಕೆರೆ ಸಂರಕ್ಷಣಾ ಸಮಿತಿ ರಚಿಸಬೇಕು’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.</p>.<p>ಕೆರೆ ಸಂರಕ್ಷಣೆ ಕುರಿತು ‘ಸಿಟಿಜನ್ ಆ್ಯಕ್ಷನ್ ಫೋರಂ’ ಸೇರಿದಂತೆ ಮೂವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.</p>.<p>‘ರಾಜ್ಯ ಮಟ್ಟದಲ್ಲಿ ಉನ್ನತ ಸಮಿತಿ ಹಾಗೂ ಜಿಲ್ಲಾ ಮಟ್ಟದಲ್ಲಿ ಕೆರೆ ಸಂರಕ್ಷಣಾ ಸಮಿತಿ ರಚಿಸಬೇಕು. ಈ ಸಮಿತಿಗಳು ಕೆರೆಗಳ ಸರ್ವೆ ನಡೆಸಿ, ಗಡಿ ಗುರುತಿಸಬೇಕು, ಬೇಲಿ ಅಳವಡಿಸಬೇಕು. ಸಮಿತಿ ರಚನೆ ಮಾಡಿದ ಬಗ್ಗೆ ಸಾರ್ವಜನಿಕರಿಗೆ ವ್ಯಾಪಕ ಪ್ರಚಾರ ನೀಡಬೇಕು. ಈ ಕುರಿತು ಕೋರ್ಟ್ಗೆ ಅನುಪಾಲನಾ ವರದಿ ಸಲ್ಲಿಸಬೇಕು’ ಎಂದು ನ್ಯಾಯಪೀಠ ನಿರ್ದೇಶಿಸಿದೆ.</p>.<p>‘ಕೆರೆ ಪ್ರದೇಶದ 30 ಮೀಟರ್ ಒಳಗಿರುವ ಕಟ್ಟಡಗಳನ್ನು ತೆರವುಗೊಳಿಸಬೇಕು ಎಂದು 2012ರ ಏಪ್ರಿಲ್ 11ರಂದು ಹೈಕೋರ್ಟ್ ಸರ್ಕಾರಕ್ಕೆ ಆದೇಶಿಸಿತ್ತು. ಈ ದಿಸೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ. ಆದರೆ, ಈ ಸಮಿತಿ ಈತನಕ ಕೇವಲ ಐದು ಸಭೆ ನಡೆಸಿದೆ’ ಎಂದು ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ.</p>.<p><strong>ಆಕ್ಷೇಪ:</strong> ಕೆರೆಗಳ ನಿರ್ವಹಣೆ ಜವಾಬ್ದಾರಿಯನ್ನು ಖಾಸಗಿ ಮತ್ತು ಕಾರ್ಪೊರೇಟ್ ಸಂಸ್ಥೆಗಳಿಗೆ ವಹಿಸಿ ಆ ಕುರಿತಂತೆ ಒಪ್ಪಂದ ಮಾಡಿಕೊಂಡಿರುವ ರಾಜ್ಯ ಸರ್ಕಾರದ ಕ್ರಮಕ್ಕೂ ನ್ಯಾಯಪೀಠ ಇದೇ ವೇಳೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.</p>.<p>‘ಒಪ್ಪಂದದ ಕಾನೂನು ಸಿಂಧುತ್ವವನ್ನು ನ್ಯಾಯಾಲಯ ಪರಿಶೀಲಿಸಲಿದೆ. ಅಲ್ಲಿಯವರೆಗೆ ಈ ರೀತಿಯ ಬೇರಾವುದೇ ಒಪ್ಪಂದ ಮಾಡಿಕೊಳ್ಳಬಾರದು. ಆದರೆ, ಕೆರೆಗಳ ಅಭಿವೃದ್ಧಿ ಹಾಗೂ ಪುನರುಜ್ಜೀವನಕ್ಕೆ ಕಾರ್ಪೋರೇಟ್ ಸಂಸ್ಥೆಗಳು ಸರ್ಕಾರಕ್ಕೆ ಹಣ ನೀಡುವುದಕ್ಕೆ ಈ ಆದೇಶ ಅಡ್ಡಿ ಬರುವುದಿಲ್ಲ’ ಎಂದೂ ನ್ಯಾಯಪೀಠ ಸ್ಪಷ್ಟಪಡಿಸಿದೆ.</p>.<p><strong>ಸರ್ವೆ ಕಾರ್ಯ ಬಾಕಿ:</strong> ‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ 205 ಕೆರೆಗಳಿವೆ. ಅವುಗಳಲ್ಲಿ 160 ಕೆರೆಗಳ ಸರ್ವೆ ನಡೆಸಲಾಗಿದೆ. ಉಳಿದ 45 ಕೆರೆಗಳ ಸರ್ವೆ ಕಾರ್ಯ ಬಾಕಿ ಇದೆ’ ಎಂದು ಬಿಬಿಎಂಪಿ ನ್ಯಾಯಪೀಠಕ್ಕೆ ಮಾಹಿತಿ ನೀಡಿದೆ.</p>.<p>ಇದನ್ನು ಪರಿಗಣಿಸಿದ ನ್ಯಾಯಪೀಠ, ‘ಎರಡು ತಿಂಗಳಲ್ಲಿ ಉಳಿದ 45 ಕೆರೆಗಳ ಸರ್ವೆ ಕಾರ್ಯ ಪೂರ್ಣಗೊಳಿಸಬೇಕು. ಒತ್ತುವರಿ ಮತ್ತು ಬಫರ್ ಝೋನ್ನಲ್ಲಿ ನಿರ್ಮಿಸಿರುವ ಕಟ್ಟಡಗಳನ್ನು ತೆರವುಗೊಳಿಸಲು ಸರ್ಕಾರ ಮತ್ತು ಬಿಬಿಎಂಪಿ ಜಂಟಿಯಾಗಿ ಕ್ರಮ ಜರುಗಿಸಬೇಕು’ ಎಂದು ನಿರ್ದೇಶಿಸಿ ವಿಚಾರಣೆಯನ್ನು ಏಪ್ರಿಲ್ 20ಕ್ಕೆ ಮುಂದೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>