‘ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದ ತಜ್ಞರನ್ನು ಒಳಗೊಂಡ ಶೋಧನಾ ಸಮಿತಿ ಶಿಫಾರಸು ಮಾಡುವ ಹೆಸರುಗಳನ್ನು ಮುಖ್ಯಮಂತ್ರಿ ಅನುಮೋದಿಸಿ ಪ್ರಸ್ತಾವನೆಯನ್ನು ರಾಜ್ಯಪಾಲರಿಗೆ ಕಳುಹಿಸಬೇಕು. ಆದರೆ, ಈ ಪ್ರಕ್ರಿಯೆಯನ್ನು ಷಡಕ್ಷರಿಸ್ವಾಮಿ ಅವರ ನೇಮಕ ವಿಷಯದಲ್ಲಿ ಪಾಲಿಸಿಲ್ಲ. ಸುಪ್ರೀಂ ಕೋರ್ಟ್, ಹೈಕೋರ್ಟ್ ನಿರ್ದೇಶನಗಳು, ಹೋಟಾ ಸಮಿತಿ ಶಿಫಾರಸುಗಳನ್ನು ಉಲ್ಲಂಘಿಸಲಾಗಿದೆ’ ಎಂದು ಅರ್ಜಿಯಲ್ಲಿ ದೂರಲಾಗಿದೆ.