2010ರ ಸೆ. 1ರಂದು ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುವ ಸಮಯದಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳು ಶಿವಲಿಂಗಯ್ಯ ಅವರನ್ನು ಕಟ್ಟಡ ನಿರ್ಮಾಣ ಪ್ರದೇಶದಲ್ಲಿಯೇ ಅಡ್ಡಹಾಕಿ ಹಣ ನೀಡುವಂತೆ ಒತ್ತಾಯಿಸಿದ್ದರು. ಇದಕ್ಕೆ ಶಿವಲಿಂಗಯ್ಯ ಪ್ರತಿರೋಧ ವ್ಯಕ್ತಪಡಿಸಿದಾಗ ಅಲ್ಲೇ ಇದ್ದ ಸಿಮೆಂಟ್ ಇಟ್ಟಿಗೆಗಳಿಂದ ತಲೆಗೆ ಜಜ್ಜಿ ಹಲ್ಲೆ ನಡೆಸಿದ್ದರು. ಈ ಘಟನೆಯಲ್ಲಿ ಶಿವಲಿಂಗಯ್ಯ ಮೃತಪಟ್ಟಿದ್ದರು.