ಶಿವಕುಮಾರ್ ಅವರಿಗೆ ಸೇರಿದ ಮನೆಗಳ ಮೇಲಿನ ಐ.ಟಿ ದಾಳಿಗೆ ಸಂಬಂಧಿಸಿದಂತೆ ದೆಹಲಿಯ ಕರ್ನಾಟಕ ಭವನದ ನೌಕರ ಆಂಜನೇಯ ಹನುಮಂತಯ್ಯ, ಸುನಿಲ್ ಕುಮಾರ್ ಶರ್ಮ ಹಾಗೂ ಸಚಿನ್ ನಾರಾಯಣ ಅವರ ಅರ್ಜಿಗಳ ವಿಚಾರಣೆಯನ್ನು ಇದೇ 14ಕ್ಕೆ ಹಾಗೂ ಶಿವಕುಮಾರ್ ಅರ್ಜಿಯನ್ನು ಇದೇ 22ಕ್ಕೆ ಮುಂದೂಡಲಾಗಿದೆ. ಶಿವಕುಮಾರ್ ಅವರ ಆಪ್ತ ಸುನಿಲ್ ಕುಮಾರ್ ಶರ್ಮ ಅವರಿಗೆ ಅವರಿಗೆ ಸೇರಿದ ದೆಹಲಿ ಫ್ಲ್ಯಾಟ್ನಿಂದ ವಶಪಡಿಸಿಕೊಂಡ ₹ 6.68 ಕೋಟಿ ಮೊತ್ತಕ್ಕೆ ಸಂಬಂಧಿಸಿದಂತೆ ಇ.ಡಿ. ಶಿವಕುಮಾರ್ ಅವರಿಗೆ ಸಮನ್ಸ್ ಜಾರಿ ಮಾಡಿದ್ದು ಶುಕ್ರವಾರ (ಫೆ.8) ಅವರು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.