<p><strong>ಬೆಂಗಳೂರು:</strong> ‘ಅತ್ಯಾಚಾರಕ್ಕೆ ಈಡಾದ ನಂತರ ಸುಸ್ತಾಗಿ ಮಲಗಿದ ಕಾರಣ ಪೊಲೀಸರಿಗೆ ದೂರು ನೀಡುವಲ್ಲಿ ಏಳು ದಿನಗಳ ವಿಳಂಬವಾಗಿದೆ ಎಂಬ ಸಂತ್ರಸ್ತೆ ಹೇಳಿಕೆ ಭಾರತೀಯ ನಾರಿಯ ಲಕ್ಷಣವಲ್ಲ’ ಎಂದು ಉಲ್ಲೇಖಿಸಿದ್ದ ಪದಗಳನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ತೀರ್ಪಿನಿಂದ ತೆಗೆದು ಹಾಕಿದೆ.</p>.<p>ಈ ಕುರಿತಂತೆ ರಾಜ್ಯ ಪ್ರಾಸಿಕ್ಯೂಷನ್ ಸಲ್ಲಿಸಿದ ಮನವಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಪುರಸ್ಕರಿಸಿದೆ.</p>.<p>ಪ್ರಾಸಿಕ್ಯೂಷನ್ ಅರ್ಜಿಗೆ ಸಂಬಂಧಿಸಿದಂತೆ ಅರ್ಜಿದಾರ ಆರೋಪಿ ಪರ ಹಿರಿಯ ವಕೀಲ ಸಿ.ಎಚ್. ಹನುಮಂತರಾಯ ಅವರು, ‘ಪ್ರಾಸಿಕ್ಯೂಷನ್ ಸಲ್ಲಿಸಿರುವ ಅರ್ಜಿಗೆ ನಮ್ಮ ತಕರಾರುಇಲ್ಲ’ ಎಂದು ಲಿಖಿತ ಉತ್ತರ ಸಲ್ಲಿಸಿದರು.</p>.<p>ನ್ಯಾಯಪೀಠ ಇದನ್ನು ಮಾನ್ಯ ಮಾಡಿದೆ. ಸಾರ್ವಜನಿಕ ಚರ್ಚೆಗೆ ಕಾರಣವಾಗಿದ್ದ ಉಲ್ಲೇಖಿತ ಅಭಿಪ್ರಾಯವನ್ನು ತೀರ್ಪಿನಿಂದ ಕೈಬಿಟ್ಟಿದೆ.</p>.<p>ತೀರ್ಪು ಹೊರಬಿದ್ದ ನಂತರ ಇತಿಹಾಸಕಾರ ರಾಮಚಂದ್ರ ಗುಹಾ ಸೇರಿದಂತೆ ಪ್ರಗತಿಪರ ಸಂಘಟನೆಗಳು ನ್ಯಾ.ಕೃಷ್ಣ ದೀಕ್ಷಿತ್ ಅವರಿಗೆ ಬಹಿರಂಗ ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಿದ್ದವು. ಈ ಆಕ್ಷೇಪಕ್ಕೆ ನಿವೃತ್ತ ಲೋಕಾಯುಕ್ತ ನ್ಯಾ.ಎನ್.ಸಂತೋಷ ಹೆಗ್ಡೆ, ವಕೀಲರ ಪರಿಷತ್ ಸದಸ್ಯ ಎಸ್.ಬಸವರಾಜ್, ಹಿರಿಯ ವಕೀಲರಾದ ಸಿ.ಎಚ್. ಹನುಮಂತರಾಯ, ಎಸ್.ಪಿ.ಶಂಕರ್, ‘ಈ ರೀತಿ ಪತ್ರ ಬರೆಯುವ ಕ್ರಮ ಸಾಧುವಲ್ಲ’ ಎಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಅತ್ಯಾಚಾರಕ್ಕೆ ಈಡಾದ ನಂತರ ಸುಸ್ತಾಗಿ ಮಲಗಿದ ಕಾರಣ ಪೊಲೀಸರಿಗೆ ದೂರು ನೀಡುವಲ್ಲಿ ಏಳು ದಿನಗಳ ವಿಳಂಬವಾಗಿದೆ ಎಂಬ ಸಂತ್ರಸ್ತೆ ಹೇಳಿಕೆ ಭಾರತೀಯ ನಾರಿಯ ಲಕ್ಷಣವಲ್ಲ’ ಎಂದು ಉಲ್ಲೇಖಿಸಿದ್ದ ಪದಗಳನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ತೀರ್ಪಿನಿಂದ ತೆಗೆದು ಹಾಕಿದೆ.</p>.<p>ಈ ಕುರಿತಂತೆ ರಾಜ್ಯ ಪ್ರಾಸಿಕ್ಯೂಷನ್ ಸಲ್ಲಿಸಿದ ಮನವಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಪುರಸ್ಕರಿಸಿದೆ.</p>.<p>ಪ್ರಾಸಿಕ್ಯೂಷನ್ ಅರ್ಜಿಗೆ ಸಂಬಂಧಿಸಿದಂತೆ ಅರ್ಜಿದಾರ ಆರೋಪಿ ಪರ ಹಿರಿಯ ವಕೀಲ ಸಿ.ಎಚ್. ಹನುಮಂತರಾಯ ಅವರು, ‘ಪ್ರಾಸಿಕ್ಯೂಷನ್ ಸಲ್ಲಿಸಿರುವ ಅರ್ಜಿಗೆ ನಮ್ಮ ತಕರಾರುಇಲ್ಲ’ ಎಂದು ಲಿಖಿತ ಉತ್ತರ ಸಲ್ಲಿಸಿದರು.</p>.<p>ನ್ಯಾಯಪೀಠ ಇದನ್ನು ಮಾನ್ಯ ಮಾಡಿದೆ. ಸಾರ್ವಜನಿಕ ಚರ್ಚೆಗೆ ಕಾರಣವಾಗಿದ್ದ ಉಲ್ಲೇಖಿತ ಅಭಿಪ್ರಾಯವನ್ನು ತೀರ್ಪಿನಿಂದ ಕೈಬಿಟ್ಟಿದೆ.</p>.<p>ತೀರ್ಪು ಹೊರಬಿದ್ದ ನಂತರ ಇತಿಹಾಸಕಾರ ರಾಮಚಂದ್ರ ಗುಹಾ ಸೇರಿದಂತೆ ಪ್ರಗತಿಪರ ಸಂಘಟನೆಗಳು ನ್ಯಾ.ಕೃಷ್ಣ ದೀಕ್ಷಿತ್ ಅವರಿಗೆ ಬಹಿರಂಗ ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಿದ್ದವು. ಈ ಆಕ್ಷೇಪಕ್ಕೆ ನಿವೃತ್ತ ಲೋಕಾಯುಕ್ತ ನ್ಯಾ.ಎನ್.ಸಂತೋಷ ಹೆಗ್ಡೆ, ವಕೀಲರ ಪರಿಷತ್ ಸದಸ್ಯ ಎಸ್.ಬಸವರಾಜ್, ಹಿರಿಯ ವಕೀಲರಾದ ಸಿ.ಎಚ್. ಹನುಮಂತರಾಯ, ಎಸ್.ಪಿ.ಶಂಕರ್, ‘ಈ ರೀತಿ ಪತ್ರ ಬರೆಯುವ ಕ್ರಮ ಸಾಧುವಲ್ಲ’ ಎಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>