ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ‘ಇನ್ನಷ್ಟು ಸಮಯಾವಕಾಶಬೇಕು’ ಎಂದು ಕೋರಿದರು. ಇದಕ್ಕೆ ಗರಂ ಆದ ನ್ಯಾಯಮೂರ್ತಿಗಳು, ‘ಹೊರಗೆ ನಿಮ್ಮ ಕಾನೂನು ಮಂತ್ರಿಗಳು ಬಹಿರಂಗ ವೇದಿಕೆಗಳಲ್ಲಿ, ಸರ್ಕಾರಿ ವ್ಯಾಜ್ಯಗಳ ವಿಲೇವಾರಿ ವಿಳಂಬಕ್ಕೆ ನ್ಯಾಯಮೂರ್ತಿಗಳು ದಿನಾಂಕ ನೀಡಿ ಮುಂದೂಡುವುದೇ ಕಾರಣ ಎನ್ನುತ್ತಾರೆ. ಆದರೆ, ಕೋರ್ಟ್ನಲ್ಲಿ ಸರ್ಕಾರದ ಪರ ವಕೀಲರು ಸಮಯಾವಕಾಶ ಬೇಕು ಎಂದು ಕೋರುತ್ತೀರಿ’ ಎಂದು ಮೌಖಿಕವಾಗಿ ತರಾಟೆಗೆ ತೆಗೆದುಕೊಂಡರು.