ಹದರ್ಶನ್ ಸಿಂಗ್ ನಾಗಪಾಲ್ ಎಂಬಾತ ಮನೆಯಲ್ಲಿ ತಿಂಡಿ ತಿನಿಸು ತಯಾರಿಸಿ ಮಾರಾಟ ಮಾಡುತ್ತಿದ್ದಾನೆ. ಅವರ ಹೆಸರನ್ನು ದುರುಪಯೋಗಪಡಿಸಿಕೊಂಡು ಅಪರಿಚಿತ ವ್ಯಕ್ತಿ ಪತ್ರ ಬರೆದಿರುವುದು ಗೊತ್ತಾಗಿದೆ. ಅಲ್ಲದೆ, ಹಳೇ ದ್ವೇಷದ ಹಿನ್ನೆಲೆಯಲ್ಲಿ ನಾಗಪಾಲ್ ವಿರುದ್ಧ ಷಡ್ಯಂತ್ರ ರೂಪಿಸಿರುವ ವ್ಯಕ್ತಿಯ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದ್ದು, ಶೀಘ್ರದಲ್ಲಿ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದರು.