ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಾದೇಶಿಕ ಭಾಷೆಗಳು ಉಳಿಯಬೇಕು. ಹಿಂದೆ ನಾನು ಮತ್ತು ಎಸ್.ಎಲ್.ಭೈರಪ್ಪ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದೆವು. ಈ ಬಗ್ಗೆ ಚರ್ಚೆ ಮಾಡಿದ್ದೆವು. ಪ್ರಾದೇಶಿಕ ಭಾಷೆಗಳ ಉಳಿವಿಗೆ ಶ್ರಮಿಸಲಾಗುವುದು ಎಂದು ಮೋದಿ ಕೂಡ ಮಾತು ಕೊಟ್ಟಿದ್ದರು. ಆರ್.ಎಸ್.ಎಸ್. ಕೂಡ ಮಾತೃಭಾಷೆ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಹೇಳಿದೆ. ಆದರೆ, ಈಗ ಮತ್ತೆ ಹಿಂದಿ ವಿಚಾರ ಚರ್ಚೆಗೆ ಬಂದಿದೆ. ಸಭೆಯ ನಂತರ ಈ ಬಗ್ಗೆ ಪ್ರತಿಕ್ರಿಯಿಸಲಾಗುವುದು’ ಎಂದು ಅವರು ಹೇಳಿದರು.