ಯತ್ತಿನಹಳ್ಳಿ ಗ್ರಾಮದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಕ್ಷೇತ್ರದಲ್ಲಿ ‘ಸುನಾಮಿ’ ರೀತಿ ಬದಲಾವಣೆಯಾಗಿದೆ. ಕ್ಷೇತ್ರದ ಜನರು ಪ್ರಜ್ಞಾವಂತರಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರುನಮ್ಮ ಕ್ಷೇತ್ರಕ್ಕೆ ₹ 250 ಕೋಟಿ ಅನುದಾನ ನೀಡಿದ್ದಾರೆ. ಸರ್ವಜ್ಞ ಏತ ನೀರಾವರಿ ಯೋಜನೆಗೆ ಅನುಮೋದನೆ ಸಿಕ್ಕಿದೆ. ರಾಜ್ಯದಲ್ಲಿ ಸ್ಥಿರ ಮತ್ತು ಸುಭದ್ರ ಸರ್ಕಾರ ಬೇಕಿದೆ. ಈ ಎಲ್ಲ ಕಾರಣಗಳಿಂದ ಜನರು ನನ್ನನ್ನು ಗೆಲ್ಲಿಸುತ್ತಾರೆ. 40 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇನೆ’ ಎಂದು ಹೇಳಿದರು.