ಗಣರಾಜ್ಯೋತ್ಸವ ಸಂದರ್ಭ ಸರ್ಕಾರಿ ಶಾಲಾ ಮಕ್ಕಳು ರಾಷ್ಟ್ರ ಧ್ವಜ ಹಿಡಿದು ಮೆರವಣಿಗೆ ಹೊರಟಾಗ ಮಕ್ಕಳ ಮೇಲೆ ಹಲ್ಲೆ ನಡೆಸಿ, ಬಾವುಟ ಕಸಿದುಕೊಂಡ ಘಟನೆ ನಡೆಯಿತು. ಇದಕ್ಕೆ ಈ ವಿಶ್ವವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳು ಕಾರಣ. ಸಾರ್ವಜನಿಕರ ಒತ್ತಡದ ಮೇರೆಗೆ ಆರೋಪಿಗಳನ್ನು ಬಂಧಿಸಿ ಎಫ್ಐಆರ್ ದಾಖಲಿಸಿತು. ಆದರೆ, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಒತ್ತಡ ಮೇರೆಗೆ ಬಂಧಿತರನ್ನು ಬಿಡುಗಡೆ ಮಾಡಲಾಯಿತು. ಬಂಧನಕ್ಕೆ ಒಳಗಾದವರು ಕಾಶ್ಮೀರ ಮೂಲದವರು ಎಂದು ಪೂಜಾರಿ ಹೇಳಿದರು.