<p><strong>ಹಾಸನ:</strong> ಪಕ್ಷ–ಸ್ವಾಮಿ ನಿಷ್ಠೆ, ಹಿರಿತನ ಹಾಗೂ ಎಲ್ಲರನ್ನೂ ಸಂಭಾಳಿಸಿಕೊಂಡು ಹೋಗುವ ಸೌಮ್ಯ ಸ್ವಭಾವದ, ಸಕಲೇಶಪುರ ಮೀಸಲು ಕ್ಷೇತ್ರದ ಶಾಸಕ ಎಚ್.ಕೆ.ಕುಮಾರಸ್ವಾಮಿ ಅವರಿಗೆ ಜೆಡಿಎಸ್ ಸಾರಥ್ಯ ವಹಿಸಲಾಗಿದೆ.</p>.<p>ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ರಂತೆಯೇ ಕುಮಾರಸ್ವಾಮಿ ಅವರೂ ಆರು ಬಾರಿ ಶಾಸಕರಾಗಿರುವುದು ವಿಶೇಷ.</p>.<p>ದೇವೇಗೌಡರು 6 ಸಲವೂ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಿಂದ ಗೆದ್ದಿದ್ದರು. ಆದರೆ, ಕುಮಾರಸ್ವಾಮಿ ಮೊದಲ ಮೂವರು ಅವಧಿಗೆ, ಈ ಹಿಂದೆ ಮೀಸಲು ಕ್ಷೇತ್ರವಾಗಿದ್ದ ಬೇಲೂರು ಕ್ಷೇತ್ರದಿಂದ 1985, 1994 ಮತ್ತು 2004 ರಲ್ಲಿ ವಿಧಾನಸಭೆಗೆ ಆಯ್ಕೆಯಾಗಿದ್ದರು.</p>.<p>ಅದಾದ ಬಳಿಕ ಮೀಸಲು ಕ್ಷೇತ್ರವಾದ ಆಲೂರು-ಸಕಲೇಶಪುರ ವಿಧಾನಸಭಾ ಕ್ಷೇತ್ರದಿಂದ 2008, 2013 ಮತ್ತು 2018 ರಲ್ಲಿ ಸತತ ಮೂರು ಬಾರಿ ಜಯಗಳಿಸುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ.</p>.<p>ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವವೂ ಅವರಿಗಿದೆ.</p>.<p>ಈ ಬಾರಿಯೂ ಅವರು ಮಂತ್ರಿಯಾಗಲಿದ್ದಾರೆ ಎಂದೇ ಹೇಳಲಾಗಿತ್ತು. ಆದರೆ, ಅದೃಷ್ಟ ಒದಗಿ ಬರಲಿಲ್ಲ. ಮಂತ್ರಿ ಸ್ಥಾನ ಬದಲಿಗೆ ಪ್ರಬಲ ನಿಗಮ, ಮಂಡಳಿಸಿಗಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಅದೂ<br />ಸಿಗಲಿಲ್ಲ. ಕೊನೆಗೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಹುದ್ದೆ ನೀಡುವ ಮೂಲಕ ದಲಿತ ಸಮುದಾಯವನ್ನು ಕಡೆಗಣಿಸಿಲ್ಲ ಎಂಬ ಸಂದೇಶವನ್ನು ಪಕ್ಷ ಸಾರಿದೆ.</p>.<p>ಅಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿಕೊಳ್ಳುವ ಮೂಲಕ ಈ ಸ್ಥಾನ ಅಲಂಕರಿಸಿದ ಮತ್ತೊಬ್ಬ ದಲಿತ ನಾಯಕ ಎಂಬ ಹೆಗ್ಗಳಿಕೆಗೆ ಕುಮಾರಸ್ವಾಮಿ ಪಾತ್ರರಾಗಿದ್ದಾರೆ. ಈ ಹಿಂದೆ ಪರಿಶಿಷ್ಟ ಪಂಗಡಕ್ಕೆ ಸೇರಿದ ದಿವಂಗತ ಡಿ.ಟಿ.ಜಯಕುಮಾರ್ ಅಧ್ಯಕ್ಷರಾಗಿದ್ದರು. ಅದಾದ ನಂತರ ಮೆರಾಜುದ್ದೀನ್ ಪಟೇಲ್, ಕೃಷ್ಣಪ್ಪ, ಇತ್ತೀಚೆಗೆ ಎಚ್.ವಿಶ್ವನಾಥ್ ಅವರನ್ನು ಬಿಟ್ಟರೆ ದೇವೇಗೌಡರು, ಕುಮಾರಸ್ವಾಮಿ ಅವರೇ ಈ ಹುದ್ದೆ ನಿಭಾಯಿಸಿದ್ದಾರೆ.</p>.<p>ಅಲ್ಲದೇ ಜಿಲ್ಲೆಯಿಂದ ಈ ಜವಾಬ್ದಾರಿ ವಹಿಸಿಕೊಂಡ ಮೂರನೇ ನಾಯಕ ಕುಮಾರಸ್ವಾಮಿ. ಈ ಹಿಂದೆ ದೇವೇಗೌಡರು, ನಂತರ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷರಾಗಿದ್ದರು. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಸಹ ಜಿಲ್ಲೆಯವರೇ ಎಂಬುದು ಗಮರ್ನಾಹ ಅಂಶ.</p>.<p>ಇತ್ತೀಚೆಗೆ ದಲಿತ ಸಿ.ಎಂ ಕೂಗು ಎದ್ದಿತ್ತು. ‘ದಲಿತರಿಗೆ ಏನು ಮಾಡಿದ್ದೀರಿ’ ಎಂದು ಯಾರೂ ಬೊಟ್ಟು ಮಾಡಬಾರದು ಎಂಬ ಕಾರಣಕ್ಕೆ ಗೌಡರು ಕುಮಾರಸ್ವಾಮಿ ಅವರಿಗೆ ಅಧ್ಯಕ್ಷ ಪಟ್ಟ ಕಟ್ಟಿದ್ದಾರೆ ಎಂದು ವಿಶ್ಲೇಷಿಸಲಾಗಿದೆ.</p>.<p>‘ಹೊಸ ಜವಾಬ್ದಾರಿ ನಿಭಾಯಿಸುವ ಶಕ್ತಿಯೂ ಇದೆ. ಹೊರುವ ಶಕ್ತಿಯೂ ಇದೆ. ಸಮಯ ಬಂದಾಗ ಎಲ್ಲವೂ ಬಹಿರಂಗವಾಗಲಿದೆ’ ಎಂದು ಎರಡು ದಿನಗಳ ಹಿಂದೆಯಷ್ಟೇ ಎಚ್.ಕೆ.ಕುಮಾರಸ್ವಾಮಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಪಕ್ಷ–ಸ್ವಾಮಿ ನಿಷ್ಠೆ, ಹಿರಿತನ ಹಾಗೂ ಎಲ್ಲರನ್ನೂ ಸಂಭಾಳಿಸಿಕೊಂಡು ಹೋಗುವ ಸೌಮ್ಯ ಸ್ವಭಾವದ, ಸಕಲೇಶಪುರ ಮೀಸಲು ಕ್ಷೇತ್ರದ ಶಾಸಕ ಎಚ್.ಕೆ.ಕುಮಾರಸ್ವಾಮಿ ಅವರಿಗೆ ಜೆಡಿಎಸ್ ಸಾರಥ್ಯ ವಹಿಸಲಾಗಿದೆ.</p>.<p>ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ರಂತೆಯೇ ಕುಮಾರಸ್ವಾಮಿ ಅವರೂ ಆರು ಬಾರಿ ಶಾಸಕರಾಗಿರುವುದು ವಿಶೇಷ.</p>.<p>ದೇವೇಗೌಡರು 6 ಸಲವೂ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಿಂದ ಗೆದ್ದಿದ್ದರು. ಆದರೆ, ಕುಮಾರಸ್ವಾಮಿ ಮೊದಲ ಮೂವರು ಅವಧಿಗೆ, ಈ ಹಿಂದೆ ಮೀಸಲು ಕ್ಷೇತ್ರವಾಗಿದ್ದ ಬೇಲೂರು ಕ್ಷೇತ್ರದಿಂದ 1985, 1994 ಮತ್ತು 2004 ರಲ್ಲಿ ವಿಧಾನಸಭೆಗೆ ಆಯ್ಕೆಯಾಗಿದ್ದರು.</p>.<p>ಅದಾದ ಬಳಿಕ ಮೀಸಲು ಕ್ಷೇತ್ರವಾದ ಆಲೂರು-ಸಕಲೇಶಪುರ ವಿಧಾನಸಭಾ ಕ್ಷೇತ್ರದಿಂದ 2008, 2013 ಮತ್ತು 2018 ರಲ್ಲಿ ಸತತ ಮೂರು ಬಾರಿ ಜಯಗಳಿಸುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ.</p>.<p>ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವವೂ ಅವರಿಗಿದೆ.</p>.<p>ಈ ಬಾರಿಯೂ ಅವರು ಮಂತ್ರಿಯಾಗಲಿದ್ದಾರೆ ಎಂದೇ ಹೇಳಲಾಗಿತ್ತು. ಆದರೆ, ಅದೃಷ್ಟ ಒದಗಿ ಬರಲಿಲ್ಲ. ಮಂತ್ರಿ ಸ್ಥಾನ ಬದಲಿಗೆ ಪ್ರಬಲ ನಿಗಮ, ಮಂಡಳಿಸಿಗಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಅದೂ<br />ಸಿಗಲಿಲ್ಲ. ಕೊನೆಗೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಹುದ್ದೆ ನೀಡುವ ಮೂಲಕ ದಲಿತ ಸಮುದಾಯವನ್ನು ಕಡೆಗಣಿಸಿಲ್ಲ ಎಂಬ ಸಂದೇಶವನ್ನು ಪಕ್ಷ ಸಾರಿದೆ.</p>.<p>ಅಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿಕೊಳ್ಳುವ ಮೂಲಕ ಈ ಸ್ಥಾನ ಅಲಂಕರಿಸಿದ ಮತ್ತೊಬ್ಬ ದಲಿತ ನಾಯಕ ಎಂಬ ಹೆಗ್ಗಳಿಕೆಗೆ ಕುಮಾರಸ್ವಾಮಿ ಪಾತ್ರರಾಗಿದ್ದಾರೆ. ಈ ಹಿಂದೆ ಪರಿಶಿಷ್ಟ ಪಂಗಡಕ್ಕೆ ಸೇರಿದ ದಿವಂಗತ ಡಿ.ಟಿ.ಜಯಕುಮಾರ್ ಅಧ್ಯಕ್ಷರಾಗಿದ್ದರು. ಅದಾದ ನಂತರ ಮೆರಾಜುದ್ದೀನ್ ಪಟೇಲ್, ಕೃಷ್ಣಪ್ಪ, ಇತ್ತೀಚೆಗೆ ಎಚ್.ವಿಶ್ವನಾಥ್ ಅವರನ್ನು ಬಿಟ್ಟರೆ ದೇವೇಗೌಡರು, ಕುಮಾರಸ್ವಾಮಿ ಅವರೇ ಈ ಹುದ್ದೆ ನಿಭಾಯಿಸಿದ್ದಾರೆ.</p>.<p>ಅಲ್ಲದೇ ಜಿಲ್ಲೆಯಿಂದ ಈ ಜವಾಬ್ದಾರಿ ವಹಿಸಿಕೊಂಡ ಮೂರನೇ ನಾಯಕ ಕುಮಾರಸ್ವಾಮಿ. ಈ ಹಿಂದೆ ದೇವೇಗೌಡರು, ನಂತರ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷರಾಗಿದ್ದರು. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಸಹ ಜಿಲ್ಲೆಯವರೇ ಎಂಬುದು ಗಮರ್ನಾಹ ಅಂಶ.</p>.<p>ಇತ್ತೀಚೆಗೆ ದಲಿತ ಸಿ.ಎಂ ಕೂಗು ಎದ್ದಿತ್ತು. ‘ದಲಿತರಿಗೆ ಏನು ಮಾಡಿದ್ದೀರಿ’ ಎಂದು ಯಾರೂ ಬೊಟ್ಟು ಮಾಡಬಾರದು ಎಂಬ ಕಾರಣಕ್ಕೆ ಗೌಡರು ಕುಮಾರಸ್ವಾಮಿ ಅವರಿಗೆ ಅಧ್ಯಕ್ಷ ಪಟ್ಟ ಕಟ್ಟಿದ್ದಾರೆ ಎಂದು ವಿಶ್ಲೇಷಿಸಲಾಗಿದೆ.</p>.<p>‘ಹೊಸ ಜವಾಬ್ದಾರಿ ನಿಭಾಯಿಸುವ ಶಕ್ತಿಯೂ ಇದೆ. ಹೊರುವ ಶಕ್ತಿಯೂ ಇದೆ. ಸಮಯ ಬಂದಾಗ ಎಲ್ಲವೂ ಬಹಿರಂಗವಾಗಲಿದೆ’ ಎಂದು ಎರಡು ದಿನಗಳ ಹಿಂದೆಯಷ್ಟೇ ಎಚ್.ಕೆ.ಕುಮಾರಸ್ವಾಮಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>