ಮಾಧ್ಯಮಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘ಆರೋಗ್ಯ ಸೇವೆಗೆ ಅಗತ್ಯವಿರುವ ವೈದ್ಯರು ಮತ್ತು ಸಿಬ್ಬಂದಿಯನ್ನು ವಿಶೇಷ ನೇಮಕಾತಿ ಮೂಲಕ ನೇಮಿಸಿಕೊಳ್ಳಬೇಕು. ಕೊರೊನಾ ಸೋಂಕು ದೃಢಪಟ್ಟವರಿಗೆ ₹ 2 ಲಕ್ಷದಿಂದ ₹ 5 ಲಕ್ಷ ಆರ್ಥಿಕ ಸಹಾಯ ಸಿಗುವಂಥ ವಿಮೆಯನ್ನು ರಾಜ್ಯ ಸರ್ಕಾರವೇ ಮಾಡಿಕೊಡಬೇಕು. ಆ ಮೂಲಕ ಜನರಿಗೆ ನೈತಿಕ ಸ್ಥೈರ್ಯ ತುಂಬ ಬೇಕು. ಆದರೆ, ಸರ್ಕಾರ ಅತ್ಯಂತ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ’ ಎಂದು ದೂರಿದರು.