ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ಸರ್ಕಾರ ನಿಗದಿ ಮಾಡಿರುವ ದರವನ್ನು ಒಪ್ಪಿಕೊಂಡಿಲ್ಲ. ಇಂಥ ತುರ್ತು, ಅನಿವಾರ್ಯ, ಗಂಭೀರ ಪರಿಸ್ಥಿತಿಯ ಸಂದರ್ಭದಲ್ಲಿ ಸಂಘರ್ಷಕ್ಕೆ ಕಾಲವಲ್ಲ. ತಕ್ಷಣವೇ ಭಾರತೀಯ ವೈದ್ಯ ಸಂಘ ಜತೆಗೆ ಸಭೆ ಏರ್ಪಡಿಸಿ ಖಾಸಗಿ ಆಸ್ಪತ್ರೆಯ ಪ್ರತಿನಿಧಿಗಳನ್ನು ಕರೆದು ತಕ್ಷಣವೇ ಬಗೆಹರಿಸಿ ಬಿಡಬೇಕು. ಇಲ್ಲದಿದ್ದರೆ, ಗಂಡಾಂತರಕಾರಿ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದು ಪಾಟೀಲ ಹೇಳಿದ್ದಾರೆ.