ಬೆಂಗಳೂರು: ‘ಕೊರೊನಾ ಸೋಂಕು ಹರಡುತ್ತಿರುವ ಮಧ್ಯೆ, ಲಾಕ್ಡೌನ್ ಸಡಿಲಿಕೆಯಂಥ ನಿರ್ಧಾರ, ದುರಂತ ಆಹ್ವಾನಿಸುವ ನಿರ್ಣಯ’ ಎಂದು ಕಾಂಗ್ರೆಸ್ ಶಾಸಕ ಎಚ್.ಕೆ. ಪಾಟೀಲ ಅಭಿಪ್ರಾಯಪಟ್ಟಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಈ ಬಗ್ಗೆ ಪತ್ರ ಬರೆದಿರುವ ಪಾಟೀಲರು, ‘ಈ ನಿರ್ಣಯ ಶ್ರೀಮಂತ ವರ್ಗದ ಪರವೇ ಹೊರತು ಆರ್ಥಿಕ ದುಸ್ಥಿತಿಯಿಂದ ಬಳಲಿರುವ ಬಡವನ ಪರ ಇಲ್ಲ. ಹೀಗಾಗಿ, ತಕ್ಷಣ ಈ ನಿರ್ಣಯ ಕೈಬಿಡಬೇಕು’ ಎಂದು ಒತ್ತಾಯಿಸಿದ್ದಾರೆ.