ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ‘ಜೂಜು, ಮಟ್ಕಾ, ಗಾಂಜಾ, ಡ್ರಗ್ಸ್ ಬಗ್ಗೆ ವಿಶೇಷ ಗಮನವಹಿಸಿ ಕೆಲಸ ಮಾಡಬೇಕು. ದೂರು ಬರುವವರೆಗೂ ಕಾಯದೆ ಸ್ವಯಂ ಪ್ರೇರಿತರಾಗಿ ದಾಳಿ ಮಾಡಬೇಕು ಎಂದು ನಿರ್ದೇಶನ ನೀಡಿದ್ದೇನೆ. ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವುದಾಗಿ ಐಜಿಪಿ ಭರವಸೆ ನೀಡಿದ್ದಾರೆ’ ಎಂದು ಹೇಳಿದರು.