<p><strong>ಬೆಂಗಳೂರು</strong>: ‘ಕೇಂದ್ರ ಸರ್ಕಾರವು ಜಿಎಸ್ಟಿ ಪರಿಹಾರ ರೂಪದಲ್ಲಿ ರಾಜ್ಯಕ್ಕೆ ನೀಡಬೇಕಾದ ₹ 10,208 ಕೋಟಿಯನ್ನು ಶೀಘ್ರ ಬಿಡುಗಡೆ ಮಾಡಬೇಕು’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.</p>.<p>ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಗುರುವಾರ ವಿಡಿಯೊ ಸಂವಾದದ ಮೂಲಕ ನಡೆದ 40ನೇ ಜಿಎಸ್ಟಿ ಮಂಡಳಿ ಸಭೆಯಲ್ಲಿ ರಾಜ್ಯ ಸರ್ಕಾರದ ಪರವಾಗಿ ಬೊಮ್ಮಾಯಿ ಭಾಗಿಯಾಗಿದ್ದರು.</p>.<p>ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರವು ನಾಲ್ಕು ತಿಂಗಳ ಪರಿಹಾರ ರೂಪದಲ್ಲಿ ಇಷ್ಟು ದುಡ್ಡು ನೀಡುವುದು ಬಾಕಿ ಇದೆ. ಸದ್ಯ ರಾಜ್ಯ ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವುದರಿಂದ ಮಾರ್ಚ್ ತಿಂಗಳ ಪರಿಹಾರ ಮೊತ್ತವಾದ ₹ 1,460 ಕೋಟಿಯನ್ನು ತಕ್ಷಣ ಬಿಡುಗಡೆ ಮಾಡಲು ವಿನಂತಿ ಮಾಡಲಾಗಿದೆ’ ಎಂದರು.</p>.<p>‘ಪರಿಹಾರ ಶೀಘ್ರ ಬಿಡುಗಡೆಯಾಗುವ ವಿಶ್ವಾಸ ಇದೆ. ಡಿಸೆಂಬರ್ನಿಂದ ಫೆಬ್ರುವರಿವರೆಗಿನ ₹ 4,314 ಕೋಟಿಯನ್ನು ರಾಜ್ಯ ಸರ್ಕಾರ ಈಚೆಗೆ ಪಡೆದಿತ್ತು’ ಎಂದು ಹೇಳಿದರು.</p>.<p>‘ಜಿಎಸ್ಟಿ ಪಾವತಿ ವಿಳಂಬಕ್ಕೆ ಹಾಕುವ ಶೇ 18ರ ದಂಡವನ್ನು ಅರ್ಧದಷ್ಟು ಅಂದರೆ ಶೇ 9ಕ್ಕೆ ತಗ್ಗಿಸಬೇಕು ಎಂದು ಒತ್ತಾಯಿಸಲಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕೇಂದ್ರ ಸರ್ಕಾರವು ಜಿಎಸ್ಟಿ ಪರಿಹಾರ ರೂಪದಲ್ಲಿ ರಾಜ್ಯಕ್ಕೆ ನೀಡಬೇಕಾದ ₹ 10,208 ಕೋಟಿಯನ್ನು ಶೀಘ್ರ ಬಿಡುಗಡೆ ಮಾಡಬೇಕು’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.</p>.<p>ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಗುರುವಾರ ವಿಡಿಯೊ ಸಂವಾದದ ಮೂಲಕ ನಡೆದ 40ನೇ ಜಿಎಸ್ಟಿ ಮಂಡಳಿ ಸಭೆಯಲ್ಲಿ ರಾಜ್ಯ ಸರ್ಕಾರದ ಪರವಾಗಿ ಬೊಮ್ಮಾಯಿ ಭಾಗಿಯಾಗಿದ್ದರು.</p>.<p>ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರವು ನಾಲ್ಕು ತಿಂಗಳ ಪರಿಹಾರ ರೂಪದಲ್ಲಿ ಇಷ್ಟು ದುಡ್ಡು ನೀಡುವುದು ಬಾಕಿ ಇದೆ. ಸದ್ಯ ರಾಜ್ಯ ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವುದರಿಂದ ಮಾರ್ಚ್ ತಿಂಗಳ ಪರಿಹಾರ ಮೊತ್ತವಾದ ₹ 1,460 ಕೋಟಿಯನ್ನು ತಕ್ಷಣ ಬಿಡುಗಡೆ ಮಾಡಲು ವಿನಂತಿ ಮಾಡಲಾಗಿದೆ’ ಎಂದರು.</p>.<p>‘ಪರಿಹಾರ ಶೀಘ್ರ ಬಿಡುಗಡೆಯಾಗುವ ವಿಶ್ವಾಸ ಇದೆ. ಡಿಸೆಂಬರ್ನಿಂದ ಫೆಬ್ರುವರಿವರೆಗಿನ ₹ 4,314 ಕೋಟಿಯನ್ನು ರಾಜ್ಯ ಸರ್ಕಾರ ಈಚೆಗೆ ಪಡೆದಿತ್ತು’ ಎಂದು ಹೇಳಿದರು.</p>.<p>‘ಜಿಎಸ್ಟಿ ಪಾವತಿ ವಿಳಂಬಕ್ಕೆ ಹಾಕುವ ಶೇ 18ರ ದಂಡವನ್ನು ಅರ್ಧದಷ್ಟು ಅಂದರೆ ಶೇ 9ಕ್ಕೆ ತಗ್ಗಿಸಬೇಕು ಎಂದು ಒತ್ತಾಯಿಸಲಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>