ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರವು ನಾಲ್ಕು ತಿಂಗಳ ಪರಿಹಾರ ರೂಪದಲ್ಲಿ ಇಷ್ಟು ದುಡ್ಡು ನೀಡುವುದು ಬಾಕಿ ಇದೆ. ಸದ್ಯ ರಾಜ್ಯ ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವುದರಿಂದ ಮಾರ್ಚ್ ತಿಂಗಳ ಪರಿಹಾರ ಮೊತ್ತವಾದ ₹ 1,460 ಕೋಟಿಯನ್ನು ತಕ್ಷಣ ಬಿಡುಗಡೆ ಮಾಡಲು ವಿನಂತಿ ಮಾಡಲಾಗಿದೆ’ ಎಂದರು.