ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ಪ್ರಕರಣ ಸಂಬಂಧ 124ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಿ ರಾಮನಗರ ಜೈಲಿಗೆ ಹಾಕಲಾಗಿದೆ. ಪ್ರಮುಖ ಆರೋಪಿಯನ್ನು ಶೀಘ್ರ ಬಂಧಿಸಲಾಗುವುದು. ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಆರೋಪಿಗಳ ಮೇಲೆ 8 ರಿಂದ 10 ಸೆಕ್ಷನ್ಗಳನ್ನು ಹಾಕಲಾಗಿದೆ. ಸುಗ್ರೀವಾಜ್ಞೆ ಅನುಷ್ಠಾನಗೊಂಡ ಬಳಿಕ ಹೆಚ್ಚಿನ ಸೆಕ್ಷನ್ಗಳನ್ನು ಹಾಕಲಾಗುವುದು ಎಂದರು.