ನಿಷೇಧಕ್ಕೆ ಕಿಡಿ:‘ಸಿದ್ದರಾಮಯ್ಯ ಅವರನ್ನು ಮಂಗಳೂರಿಗೆ ಹೋಗದಂತೆ ನಿರ್ಬಂಧ ಹೇರಿಲ್ಲ’ ಎಂಬ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆಗೆ ಕಟುವಾಗಿ ಪ್ರತಿಕ್ರಿಯಿಸಿದ ಅವರು, ‘ವಾಹನ, ರೈಲು, ವಿಮಾನ ಯಾವುದರ ಮೂಲಕವೂ ನಾನು ಮಂಗಳೂರು ಪ್ರವೇಶ ಮಾಡಬಾರದೆಂದು ಪೊಲೀಸರು ಆದೇಶ ಹೊರಡಿಸಿದ್ದಾರೆ’ ಎಂದರಲ್ಲದೇ ನೋಟಿಸ್ ಪ್ರತಿಯನ್ನು ಪ್ರದರ್ಶಿಸಿದರು.