<p><strong>ಬೆಂಗಳೂರು:</strong> ‘ಎಲ್ಲವನ್ನೂ ಪೊಲೀಸರೇ ತೀರ್ಮಾನ ಮಾಡುವುದಾದರೆ ಸಚಿವರ ಕೆಲಸ ಏನು? ಎಲ್ಲವನ್ನೂ ಅವರಿಗೇ ನಿರ್ಧರಿಸಲು ಬಿಟ್ಟು ರಾಜೀನಾಮೆ ನೀಡಿ ಮನೆಗೆ ಹೋಗಿ’ ಎಂದು ವಿಧಾನಸಭೆ ವಿರೋಧ ಪಕ್ಷದ<br />ನಾಯಕ ಸಿದ್ದರಾಮಯ್ಯ ಅವರು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಕುಟುಕಿದರು.</p>.<p>ಮಾಧ್ಯಮಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಸಿದ್ದರಾಮಯ್ಯ ಅವರು, ‘ಸಮಯ ಸಂದರ್ಭ ನೋಡಿ ಪೊಲೀಸರೇ ಲಾಠಿ ಚಾರ್ಜ್, ಗೋಲಿಬಾರ್ ಮಾಡಬಹುದು’ ಎಂದು ಬೊಮ್ಮಾಯಿ ಹೇಳಿದ್ದಾರೆ. ಎಲ್ಲವನ್ನೂ ಪೊಲೀಸರೇ ತೀರ್ಮಾನಿಸುವುದಾದರೆಇನ್ನೂ ಯಾಕೆ ಅವರು ಆ ಹುದ್ದೆಯಲ್ಲಿ ಮುಂದುವರಿದಿದ್ದಾರೆ’ ಎಂದು ಪ್ರಶ್ನಿಸಿದರು.</p>.<p>‘ಗೋಲಿಬಾರ್ ಪ್ರಕರಣದ ಬಗ್ಗೆ ಹೈಕೋರ್ಟ್ನ ಹಾಲಿ ನ್ಯಾಯಮೂರ್ತಿಗಳಿಂದ ನ್ಯಾಯಾಂಗ ತನಿಖೆ ನಡೆಸಬೇಕು. ಅಪರಾಧಿಗಳನ್ನು ಪತ್ತೆ ಹಚ್ಚಿ ಸೂಕ್ತ ಶಿಕ್ಷೆ ನೀಡಬೇಕು. ಗೋಲಿಬಾರ್ನಲ್ಲಿ ಪ್ರಾಣ ಕಳೆದುಕೊಂಡ ಅಮಾಯಕರ ಬಲಿದಾನಕ್ಕೆ ನ್ಯಾಯ ಸಿಗುವವರೆಗೆ ಹೋರಾಟ ಕೈಬಿಡುವುದಿಲ್ಲ’ ಎಂದು ಅವರು ಹೇಳಿದರು.</p>.<p class="Subhead"><strong>ನಿಷೇಧಕ್ಕೆ ಕಿಡಿ:</strong>‘ಸಿದ್ದರಾಮಯ್ಯ ಅವರನ್ನು ಮಂಗಳೂರಿಗೆ ಹೋಗದಂತೆ ನಿರ್ಬಂಧ ಹೇರಿಲ್ಲ’ ಎಂಬ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆಗೆ ಕಟುವಾಗಿ ಪ್ರತಿಕ್ರಿಯಿಸಿದ ಅವರು, ‘ವಾಹನ, ರೈಲು, ವಿಮಾನ ಯಾವುದರ ಮೂಲಕವೂ ನಾನು ಮಂಗಳೂರು ಪ್ರವೇಶ ಮಾಡಬಾರದೆಂದು ಪೊಲೀಸರು ಆದೇಶ ಹೊರಡಿಸಿದ್ದಾರೆ’ ಎಂದರಲ್ಲದೇ ನೋಟಿಸ್ ಪ್ರತಿಯನ್ನು ಪ್ರದರ್ಶಿಸಿದರು.</p>.<p><strong>‘ಶೋಭಾ ಜೊತೆ ಹೋಗಿದ್ದು ಏಕೆ?’</strong></p>.<p>‘ನಮ್ಮನ್ನು ಮಂಗಳೂರಿಗೆ ಹೋಗದಂತೆ ತಡೆದ ಯಡಿಯೂರಪ್ಪನವರು, ಕೋಮುಗಲಭೆಗಳಿಗೆ ಪ್ರಚೋದನೆ ನೀಡುತ್ತಲೇ ಬಂದಿರುವ ಶೋಭಾ ಕರಂದ್ಲಾಜೆ ಅವರನ್ನು ತಮ್ಮ ಜತೆ ಕರೆದುಕೊಂಡು ಹೋಗಿದ್ದೇಕೆ’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.</p>.<p>ಸರಣಿ ಟ್ವೀಟ್ ಮಾಡಿರುವ ಅವರು, ‘ಸುಳ್ಳು ಹೇಳಿಕೆಗಳಿಂದ ಕೋಮುದ್ವೇಷ ಪ್ರಚೋದಿಸಿದ ಪ್ರಕರಣಗಳ ಇತಿಹಾಸವೇ ಶೋಭಾ ಅವರಿಗಿದೆ. ಅವರನ್ನು ಕರೆದುಕೊಂಡು ಹೋಗಿರುವುದು ಶಾಂತಿ ಕದಡುವುದಕ್ಕಾಗಿಯೇ ಅಥವಾ ಶಾಂತಿ ಸ್ಥಾಪನೆಗಾಗಿಯೇ?. ಶೋಭಾ ಅವರನ್ನು ನಿರ್ಬಂಧಿಸಿದರೆ ಕರಾವಳಿಯಲ್ಲಿ ಶಾಂತಿ ನೆಲೆಸಲಿದೆ’ ಎಂದು ಪ್ರತಿಪಾದಿಸಿದ್ದಾರೆ.</p>.<blockquote><p>ಸಿದ್ದರಾಮಯ್ಯ ಮಂಗಳೂರಿಗೆ ಪ್ರವೇಶಿಸದಂತೆ ಯಾವುದೇ ರೀತಿ ನಿರ್ಬಂಧ ಹೇರಿಲ್ಲ. ಅವರು ಸರ್ಕಾರ ನಡೆಸುತ್ತಿದ್ದಾಗ ಏನು ಮಾಡಿದ್ದರು ಎಂಬುದು ಎಲ್ಲರಿಗೂ ಗೊತ್ತಿದೆ.</p><p><strong>-ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ</strong></p></blockquote>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಎಲ್ಲವನ್ನೂ ಪೊಲೀಸರೇ ತೀರ್ಮಾನ ಮಾಡುವುದಾದರೆ ಸಚಿವರ ಕೆಲಸ ಏನು? ಎಲ್ಲವನ್ನೂ ಅವರಿಗೇ ನಿರ್ಧರಿಸಲು ಬಿಟ್ಟು ರಾಜೀನಾಮೆ ನೀಡಿ ಮನೆಗೆ ಹೋಗಿ’ ಎಂದು ವಿಧಾನಸಭೆ ವಿರೋಧ ಪಕ್ಷದ<br />ನಾಯಕ ಸಿದ್ದರಾಮಯ್ಯ ಅವರು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಕುಟುಕಿದರು.</p>.<p>ಮಾಧ್ಯಮಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಸಿದ್ದರಾಮಯ್ಯ ಅವರು, ‘ಸಮಯ ಸಂದರ್ಭ ನೋಡಿ ಪೊಲೀಸರೇ ಲಾಠಿ ಚಾರ್ಜ್, ಗೋಲಿಬಾರ್ ಮಾಡಬಹುದು’ ಎಂದು ಬೊಮ್ಮಾಯಿ ಹೇಳಿದ್ದಾರೆ. ಎಲ್ಲವನ್ನೂ ಪೊಲೀಸರೇ ತೀರ್ಮಾನಿಸುವುದಾದರೆಇನ್ನೂ ಯಾಕೆ ಅವರು ಆ ಹುದ್ದೆಯಲ್ಲಿ ಮುಂದುವರಿದಿದ್ದಾರೆ’ ಎಂದು ಪ್ರಶ್ನಿಸಿದರು.</p>.<p>‘ಗೋಲಿಬಾರ್ ಪ್ರಕರಣದ ಬಗ್ಗೆ ಹೈಕೋರ್ಟ್ನ ಹಾಲಿ ನ್ಯಾಯಮೂರ್ತಿಗಳಿಂದ ನ್ಯಾಯಾಂಗ ತನಿಖೆ ನಡೆಸಬೇಕು. ಅಪರಾಧಿಗಳನ್ನು ಪತ್ತೆ ಹಚ್ಚಿ ಸೂಕ್ತ ಶಿಕ್ಷೆ ನೀಡಬೇಕು. ಗೋಲಿಬಾರ್ನಲ್ಲಿ ಪ್ರಾಣ ಕಳೆದುಕೊಂಡ ಅಮಾಯಕರ ಬಲಿದಾನಕ್ಕೆ ನ್ಯಾಯ ಸಿಗುವವರೆಗೆ ಹೋರಾಟ ಕೈಬಿಡುವುದಿಲ್ಲ’ ಎಂದು ಅವರು ಹೇಳಿದರು.</p>.<p class="Subhead"><strong>ನಿಷೇಧಕ್ಕೆ ಕಿಡಿ:</strong>‘ಸಿದ್ದರಾಮಯ್ಯ ಅವರನ್ನು ಮಂಗಳೂರಿಗೆ ಹೋಗದಂತೆ ನಿರ್ಬಂಧ ಹೇರಿಲ್ಲ’ ಎಂಬ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆಗೆ ಕಟುವಾಗಿ ಪ್ರತಿಕ್ರಿಯಿಸಿದ ಅವರು, ‘ವಾಹನ, ರೈಲು, ವಿಮಾನ ಯಾವುದರ ಮೂಲಕವೂ ನಾನು ಮಂಗಳೂರು ಪ್ರವೇಶ ಮಾಡಬಾರದೆಂದು ಪೊಲೀಸರು ಆದೇಶ ಹೊರಡಿಸಿದ್ದಾರೆ’ ಎಂದರಲ್ಲದೇ ನೋಟಿಸ್ ಪ್ರತಿಯನ್ನು ಪ್ರದರ್ಶಿಸಿದರು.</p>.<p><strong>‘ಶೋಭಾ ಜೊತೆ ಹೋಗಿದ್ದು ಏಕೆ?’</strong></p>.<p>‘ನಮ್ಮನ್ನು ಮಂಗಳೂರಿಗೆ ಹೋಗದಂತೆ ತಡೆದ ಯಡಿಯೂರಪ್ಪನವರು, ಕೋಮುಗಲಭೆಗಳಿಗೆ ಪ್ರಚೋದನೆ ನೀಡುತ್ತಲೇ ಬಂದಿರುವ ಶೋಭಾ ಕರಂದ್ಲಾಜೆ ಅವರನ್ನು ತಮ್ಮ ಜತೆ ಕರೆದುಕೊಂಡು ಹೋಗಿದ್ದೇಕೆ’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.</p>.<p>ಸರಣಿ ಟ್ವೀಟ್ ಮಾಡಿರುವ ಅವರು, ‘ಸುಳ್ಳು ಹೇಳಿಕೆಗಳಿಂದ ಕೋಮುದ್ವೇಷ ಪ್ರಚೋದಿಸಿದ ಪ್ರಕರಣಗಳ ಇತಿಹಾಸವೇ ಶೋಭಾ ಅವರಿಗಿದೆ. ಅವರನ್ನು ಕರೆದುಕೊಂಡು ಹೋಗಿರುವುದು ಶಾಂತಿ ಕದಡುವುದಕ್ಕಾಗಿಯೇ ಅಥವಾ ಶಾಂತಿ ಸ್ಥಾಪನೆಗಾಗಿಯೇ?. ಶೋಭಾ ಅವರನ್ನು ನಿರ್ಬಂಧಿಸಿದರೆ ಕರಾವಳಿಯಲ್ಲಿ ಶಾಂತಿ ನೆಲೆಸಲಿದೆ’ ಎಂದು ಪ್ರತಿಪಾದಿಸಿದ್ದಾರೆ.</p>.<blockquote><p>ಸಿದ್ದರಾಮಯ್ಯ ಮಂಗಳೂರಿಗೆ ಪ್ರವೇಶಿಸದಂತೆ ಯಾವುದೇ ರೀತಿ ನಿರ್ಬಂಧ ಹೇರಿಲ್ಲ. ಅವರು ಸರ್ಕಾರ ನಡೆಸುತ್ತಿದ್ದಾಗ ಏನು ಮಾಡಿದ್ದರು ಎಂಬುದು ಎಲ್ಲರಿಗೂ ಗೊತ್ತಿದೆ.</p><p><strong>-ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ</strong></p></blockquote>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>